ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ:ಕಾರಜೋಳ
People are tired of the state government's mismanagement: Karajola
ಬಳ್ಳಾರಿ 17: (17) ರಂದು ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರೆ ವರ್ಷ ಆಗಿದೆ. ಅವರ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ ಎಂದು . ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು. ನಗರದಲ್ಲಿಂದು ಆಯೋಜಿಸಿರುವ ಬಿಜೆಪಿ ಪ್ರತಿಭಟನಾ ರಾಲಿಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಪತ್ರಕರ್ತರೊಂದಿಗೆ ಮಾತನಾಡಿ, ಕಾಂಗ್ರೆಸ್ ನ ಕೊನೆ ಸಿಎಂ ಸಿದ್ದರಾಮಯ್ಯ ಆಗುತ್ತಾರೆ. ನಾನು ಶರಣರ ನಾಡಿನಿಂದ ಬಂದಿದ್ದೇನೆ. ನಾವು ಏನ್ ಹೇಳ್ತಿವೋ ಅದೆಲ್ಲಾ ಆಗಿದೆ. ಬಳ್ಳಾರಿ ನೆಲದಲ್ಲಿ ಗುಂಡಿನ ದಾಳಿ ಮಾಡಿಸಿ ಅವರ ಶಾಸಕ ಅಮಾಯಕನನ್ನು ಕೊಂದಿದ್ದಾನೆ. ಕೂಡಲೇ ಭರತ್ ರೆಡ್ಡಿಯನ್ನ ಬಂಧಿಸಬೇಕಿತ್ತು. ಆದರೆ, ಅವರ ಮೇಲೆ ಕೇಸ್ ಹಾಕಿಲ್ಲ. ನಾವು ಪ್ರತಿಭಟನೆ ಮಾಡಲು 50 ಲಕ್ಷ ಡಿಪೋಸಿಟ್ ಇಡಬೇಕು ಅಂತಾರೆ. ಸಾರ್ವಜನಿಕ ಸಭೆ ಸಮಾರಂಭಗಳಿಗೆ ಬ್ರಿಟಿಷರೂ ಅಡ್ಡಿ ಪಡಿಸಿಲ್ಲ. ಅವರು ದುರಾಡಳಿತ ಮಾಡಿದಾಗ ಜನ ಬ್ರಿಟಿಷರನ್ನು ಓಡಿಸಿದರು. ಇದೀಗ ಸಿದ್ದರಾಮಯ್ಯ ಅವರನ್ನ ಓಡಿಸಲು ಕಾಲ ಹತ್ತಿರ ಬಂದಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 