ಜನರು ಪ್ರವಾಹದ ಆತಂಕ ಪಡುವ ಅಗತ್ಯವಿಲ್ಲ: ಸಂಪಗಾವಿ
People need not worry about floods: Sampagavi
ಮಾಂಜರಿ 23: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು.
ಅವರು ಇವತ್ತು ಚಿಕ್ಕೋಡಿ ತಾಲೂಕಿನ ಇಂಗಳಿ ಮತ್ತು ಸಂಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.
ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಇಳಿಕೆ ಆಗುತ್ತೆ. ಜನರು ನದಿಯ ಹತ್ತಿರ ಸ್ನಾನ, ಬಟ್ಟೆ, ವಾಹನಗಳನ್ನು ತೊಳೆಯಲು ಹೋಗಬಾರದೆಂದು ಮನವಿಯನ್ನು ಮಾಡಿಕೊಳ್ಳುತ್ತೇವೆ. ವೀರಭದ್ರೇಶ್ವರ ದೇವಸ್ಥಾನ ಮುಳಗಡೆಯಾಗಿದೆ. ಅಮವಾಸ್ಯೆ ಇರುವ ಕಾರಣ ಭಕ್ತರು ದೂರದಿಂದ ನಿಂತು ದೇವರ ದರ್ಶನ ಪಡೆಯಬೇಕು ಹಾಗೂ ಪ್ರವಾಹ ಮುಂಜಾಗ್ರತಾ ಕ್ರಮವಾಗಿ ಬೋಟ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ ರಾಜೇಶ್ ಬುರ್ಲಿ ಕಂದಾಯ ನೀರೀಕ್ಷಕ ರಾಮಣ್ಣ ನಾಯಕ್ ಗ್ರಾಮ ಆಡಳಿತ ಅಧಿಕಾರಿ ಮನೋಜ್ ಕಾಂಬಳೆ ಹಾಗೂ ಇನ್ನುಳಿದ ಅಧಿಕಾರಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 