ಉತ್ತಮ ಕೆಲಸಗಳನ್ನು ಜನರು ಸ್ಮರಿಸುತ್ತಾರೆ: ಯೋಗಿ ಆದಿತ್ಯನಾಥ್
ಲಖನೌ, ಆ 17 ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಸಾರ್ವಜನಿಕ ವಲಯದ ಅಧಿಕಾರಿಗಳಿಗೆ ಪ್ರೋತ್ಸಾಹ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತಮ ಕೆಲಸಗಳನ್ನು ಜನರು ಸದಾ ಸ್ಮರಿಸುತ್ತಾರೆ ಎಂದಿದ್ದಾರೆ
ಬಡ್ತಿ ಪಡೆದ ಪಿಸಿಎಸ್ ಅಧಿಕಾರಿಗಳ ಸಂಘದ ಸದಸ್ಯರನ್ನುದ್ದೇಶಿಸಿ ಅವರು ಮಾತನಾಡಿ, ಒಳ್ಳೆಯ ಕೆಲಸಗಳನ್ನು ಮಾಡುವ ಅಧಿಕಾರಿಗಳನ್ನು ಜನ ಮರೆಯುವುದಿಲ್ಲ ನಾನೂ ಸಹ ಪ್ರತಿದಿನ 17ರಿಂದ 18 ಗಂಟೆ ಕಾರ್ಯನಿರ್ವಹಿಸುತ್ತೇನೆ ಎಂದರು
ನಾನು ಯಾವಾಗಲೂ ಮುಖ್ಯಮಂತ್ರಿಯಾಗಿರುವುದಿಲ್ಲ, ಅಂತೆಯೇ ನಿಮಗೂ ಸಹ ಅಧಿಕಾರದ ಕುರ್ಚಿ ಶಾಶ್ವತವಲ್ಲ, ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸಿ, ನಿತ್ಯದ ಕಾಯಕದಲ್ಲಿ ಶ್ರದ್ಧೆಯಿಂದ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು
ಯಾವುದೇ ಉದ್ಯೋಗಿ ಕೇವಲ ಸಂಬಳಕ್ಕಾಗಿ ಕಾರ್ಯ ನಿರ್ವಹಿಸಬಾರದು ಕೆಲಸವನ್ನು ಪ್ರೀತಿಸಬೇಕು, ಸಾರ್ವಜನಿಕರ ಕಷ್ಟ ನಷ್ಟ, ಸಮಸ್ಯೆಗಳನ್ನು ಆಲಿಸಿ, ತಮ್ಮ ವ್ಯಾಪ್ತಿಯಲ್ಲಿ ಸಹಕರಿಸಬೇಕು ಎಂದು ಯೋಗಿ ಆದಿತ್ಯನಾಥ್ ಕಿವಿಮಾತು ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 