ಶಾಶ್ವತ ಅಂಚೆ ಚಿತ್ರ ರದ್ಧತಿ ಬಿಡುಗಡೆ
Permanent postal image cancellation released
ಹಾವೇರಿ 12: ಈ ಶಾಶ್ವತ ಚಿತ್ರ ರದ್ದತಿಯಿಂದ ಕೃಷ್ಣಮೃಗ ಅಭಯಾರಣ್ಯ ಪ್ರಪಂಚದಾದ್ಯಂತ ಪ್ರಚಾರ ಹೊಂದಲು ಸಹಾಯಕವಾಗುತ್ತದೆ ಎಂದು ಬೆಂಗಳೂರು ಆಫ್ ಪೋಸ್ಟಲ್ ಸರ್ವಿಸಸ್ ವಲಯ ಡೈರೆಕ್ಟರ್ ವಿ.ತಾರಾ ಅವರು ಹೇಳಿದರು.
ರಾಣೆಬೆನ್ನೂರು ಮುಖ್ಯ ಅಂಚೆ ಕಚೇರಿಯಲ್ಲಿ ಶುಕ್ರವಾರ ಕೃಷ್ಣಮೃಗ ಅಭಯಾರಣ್ಯದ ಶಾಶ್ವತ ಚಿತ್ರ ರದ್ದತಿ ಬಿಡುಗಡೆ ಸಮಾರಂಭದಲ್ಲಿ ಶಾಶ್ವತ ಚಿತ್ರ ರದ್ದತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು
ಶಾಶ್ವತ ಅಂಚೆ ಚಿತ್ರ ರದ್ದತಿಯ ಹಿನ್ನಲೆ ಮತ್ತು ಮಹತ್ವದ ಕುರಿತು ಅಂಚೆ ಅಧೀಕ್ಷಕ ಮಂಜುನಾಥ ಹುಬ್ಬಳ್ಳಿ ಮಾತನಾಡಿದರು.
ರಾಣೆಬೆನ್ನೂರು ವಲಯ ಅರಣ್ಯಾಧಿಕಾರಿ ಲಿಂಗಾರೆಡ್ಡಿ ಮಂಕಣಿ ಅವರು ಕೃಷ್ಣಮೃಗ ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಕುರಿತು ವಿವರಿಸಿದರು.
ರಾಣೆಬೆನ್ನೂರು ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆದ ವಾಸವಾಂಬ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಅಂಚೆ ಚಿತ್ರ ರದ್ದತಿಯ ರೇಖಾ ವಿನ್ಯಾಸಕ ಹರೀಶ ಮಾಳಪ್ಪನವರ ಅವರನ್ನು ಸನ್ಮಾನಿಸಲಾಯಿತು.
ಅಂಚೆ ನೀರೀಕ್ಷಕರಾದ ಮಂಜುನಾಥ ದೊಡ್ಡಮನಿ, ಅಂಚೆ ಸಹಾಯಕಿ ಶ್ರೀಮತಿ ಪ್ರೇಮಾ ವಾಲಿ ಉಪಸ್ಥಿತರಿದ್ದರು, ಮಹಾದೇವ ಕಿತ್ತೂರ (ಆಓ ಕಐಋ) ನಿರೂಪಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 