ಶಾಶ್ವತ ಅಂಚೆ ಚಿತ್ರ ರದ್ಧತಿ ಬಿಡುಗಡೆ
Permanent postal image cancellation released
ಹಾವೇರಿ 12: ಈ ಶಾಶ್ವತ ಚಿತ್ರ ರದ್ದತಿಯಿಂದ ಕೃಷ್ಣಮೃಗ ಅಭಯಾರಣ್ಯ ಪ್ರಪಂಚದಾದ್ಯಂತ ಪ್ರಚಾರ ಹೊಂದಲು ಸಹಾಯಕವಾಗುತ್ತದೆ ಎಂದು ಬೆಂಗಳೂರು ಆಫ್ ಪೋಸ್ಟಲ್ ಸರ್ವಿಸಸ್ ವಲಯ ಡೈರೆಕ್ಟರ್ ವಿ.ತಾರಾ ಅವರು ಹೇಳಿದರು.
ರಾಣೆಬೆನ್ನೂರು ಮುಖ್ಯ ಅಂಚೆ ಕಚೇರಿಯಲ್ಲಿ ಶುಕ್ರವಾರ ಕೃಷ್ಣಮೃಗ ಅಭಯಾರಣ್ಯದ ಶಾಶ್ವತ ಚಿತ್ರ ರದ್ದತಿ ಬಿಡುಗಡೆ ಸಮಾರಂಭದಲ್ಲಿ ಶಾಶ್ವತ ಚಿತ್ರ ರದ್ದತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು
ಶಾಶ್ವತ ಅಂಚೆ ಚಿತ್ರ ರದ್ದತಿಯ ಹಿನ್ನಲೆ ಮತ್ತು ಮಹತ್ವದ ಕುರಿತು ಅಂಚೆ ಅಧೀಕ್ಷಕ ಮಂಜುನಾಥ ಹುಬ್ಬಳ್ಳಿ ಮಾತನಾಡಿದರು.
ರಾಣೆಬೆನ್ನೂರು ವಲಯ ಅರಣ್ಯಾಧಿಕಾರಿ ಲಿಂಗಾರೆಡ್ಡಿ ಮಂಕಣಿ ಅವರು ಕೃಷ್ಣಮೃಗ ಅಳಿವಿನಂಚಿನಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಕುರಿತು ವಿವರಿಸಿದರು.
ರಾಣೆಬೆನ್ನೂರು ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆದ ವಾಸವಾಂಬ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಅಂಚೆ ಚಿತ್ರ ರದ್ದತಿಯ ರೇಖಾ ವಿನ್ಯಾಸಕ ಹರೀಶ ಮಾಳಪ್ಪನವರ ಅವರನ್ನು ಸನ್ಮಾನಿಸಲಾಯಿತು.
ಅಂಚೆ ನೀರೀಕ್ಷಕರಾದ ಮಂಜುನಾಥ ದೊಡ್ಡಮನಿ, ಅಂಚೆ ಸಹಾಯಕಿ ಶ್ರೀಮತಿ ಪ್ರೇಮಾ ವಾಲಿ ಉಪಸ್ಥಿತರಿದ್ದರು, ಮಹಾದೇವ ಕಿತ್ತೂರ (ಆಓ ಕಐಋ) ನಿರೂಪಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 