ಗ್ರೀನ್, ಆರೆಂಜ್ ವಲಯಗಳಲ್ಲಿ ಕ್ಷೌರದಂಗಡಿ, ಸೆಲೂನ್ ಗಳಿಗೆ ಅನುಮತಿ
ನವದೆಹಲಿ, ಮೇ ೨,ಈ ತಿಂಗಳ ನಾಲ್ಕರಿಂದ ಆರಂಭಗೊಳ್ಳಲಿರುವ ಮೂರನೇ ಹಂತದ ಲಾಕ್ ಡೌನ್ ಅವಧಿಯಲ್ಲಿ ಮತ್ತಷ್ಟು ಚಟುವಟಿಕೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಅವಕಾಶ ಕಲ್ಪಿಸಿದೆ. ದೇಶಾದ್ಯಂತ ಕೆಂಪು ಪ್ರದೇಶಗಳನ್ನು ಹೊರತುಪಡಿಸಿ ಹಸಿರು ಹಾಗೂ ಕಿತ್ತಳೆ ಪ್ರದೇಶಗಳಲ್ಲಿ ಕ್ಷೌರದ ಅಂಗಡಿ, ಸೆಲೂನ್ ತೆರೆಯಬಹುದು ಎಂದು ಶನಿವಾರ ಪ್ರಕಟಿಸಿದೆ. ಇದರೊಂದಿಗೆ ಈ- ವಾಣಿಜ್ಯ ವೇದಿಕೆಗಳ ಮೂಲಕ ಎಲ್ಲ ರೀತಿಯ ವಸ್ತುಗಳ ಮಾರಾಟಕ್ಕೂ ಹಸಿರು ನಿಶಾನೆ ತೋರಿಸಿದೆ.ದೇಶಾದ್ಯಂತ ಲಾಕ್ ಡೌನ್ ಈ ತಿಂಗಳ ೧೭ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಇದರೊಂದಿಗೆ ಕಿತ್ತಳೆ ಹಾಗೂ ಹಸಿರು ವಲಯಗಳಲ್ಲಿ ಮತ್ತಷ್ಟು ಚಟುವಟಿಕೆ ನಡೆಸಲು ಅನುಮತಿ ನೀಡಿದೆ.
ಗ್ರೀನ್ ಜೋನ್ ನಲ್ಲಿ....
*೫೦ ಸೀಟು ಸಾಮರ್ಥ್ಯದ ಬಸ್ಸುಗಳ ಸಂಚಾರಕ್ಕೆ ಅವಕಾಶ. ಶೇ. ೫೦ ರಷ್ಟು ಸಿಬ್ಬಂದಿಯೊಂದಿಗೆ ಬಸ್ ಡಿಪೋಗಳು ಕಾರ್ಯನಿರ್ವಹಿಸಬಹುದು.
* ದೇಶಾದ್ಯಂತ ನಿಷೇಧಿಸಿದ ಚಟುವಟಿಕೆ ಹೊರತುಪಡಿಸಿ ಎಲ್ಲ ರೀತಿಯ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.
* ವೈರಸ್ ಹರಡುವುದನ್ನು ನಿಯಂತ್ರಿಸಲು ಈ ವಲಯಗಳಲ್ಲಿ ಆಯ್ದ ಚಟುವಟಿಕೆಗಳಿಗೆ ಅನುಮತಿಸಲು, ಸ್ಥಳೀಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ರಾಜ್ಯಗಳು ಪೂರ್ಣ ಅಧಿಕಾರ ಹೊಂದಿವೆ.
ಕಿತ್ತಳೆ ವಲಯಗಳಲ್ಲಿ ..
(ನಿರ್ಬಂಧ ವಲಯಗಳ ಹೊರಗೆ)
* ಜಿಲ್ಲೆಯ ಒಳಗಡೆ, ಜಿಲ್ಲೆಗಳ ನಡುವೆ ಬಸ್ ಗಳ ಸಂಚಾರ ಅವಕಾಶವಿಲ್ಲ.
* ಟ್ಯಾಕ್ಸಿಗಳು, ಕ್ಯಾಬ್ಗಳಲ್ಲಿ ಒಬ್ಬ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ.
* ಅನುಮತಿಸಿದ ಚಟುವಟಿಕೆಗಳಿಗಾಗಿ ಖಾಸಗಿ ವಾಹನಗಳು ಜಿಲ್ಲೆಗಳ ನಡುವೆ ಸಂಚರಿಸಬಹುದು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 