ವ್ಯಕ್ತಿತ್ವ ವಿಕಸನ ಉತ್ತಮ ಭವಿಷ್ಯಕ್ಕೆ ನಾಂದಿ: ಪ್ರೊ. ಘಾಟೆ
Personality development is the beginning of a better future: Prof. Ghate
ಬೆಳಗಾವಿ 09: ವಿದ್ಯಾರ್ಥಿಗಳಿಗೆ ಪದವಿಯ ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನ ದೊರೆತಲ್ಲಿ ಅದು ಅವರ ಉತ್ತಮ ಭವಿಷ್ಯಕ್ಕೆ ನಾಂದಿ ಹಾಡುತ್ತದೆ ಎಂದು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಧಾರವಾಡ ಕ್ಯಾಂಪಸ್ ನ ನಿರ್ದೇಶಕ ಪ್ರೊ. ಮಂಜುನಾಥ ಘಾಟೆ ಅಭಿಪ್ರಾಯಪಟ್ಟರು.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯವು ಜುಲೈ 8ರಿಂದ 12ರವರೆಗೆ ವಿವಿಧ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಐದು ದಿನದ ಓರಿಯೆಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪದವಿಯು ಕಲಿಕೆ, ವೈಯಕ್ತಿಕ ಬೆಳವಣಿಗೆ ಮತ್ತು ಕೌಶಲ್ಯ ಅಭಿವೃದ್ಧಿಯ ನಿರ್ಣಾಯಕ ಹಂತವಾಗಿದೆ. ಈ ಅವಧಿಯು ಅವರ ಭವಿಷ್ಯದ ಯಶಸ್ಸಿಗೆ ಅಡಿಪಾಯವನ್ನು ಹಾಕುತ್ತದೆ. ಜೊತೆಗೆ ಗಟ್ಟಿಯಾದ ವ್ಯಕ್ತಿತ್ವವನ್ನು ರೂಪಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಗಮನವನ್ನು ಬೇರೆಡೆ ಹರಿಸದೇ ಸಂಪೂರ್ಣವಾಗಿ ಶೈಕ್ಷಣಿಕ ಚಟುವಟಿಕೆ , ಸಾಮಾಜಿಕ ಸಂವಹನ ಮತ್ತು ಹೊಸ ಅನುಭವಗಳ ಅನ್ವೇಷಣೆಯತ್ತ ಗಮನಹರಿಸಬೇಕು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 