ಸೋಯಾಬಿನ್ ಬೆಳೆಗೆ ಪಯರ್ಾಯ ಬೆಳೆ ಹಾಕಲು ಮನವಿ: ಸಚಿವ ಪಾಟೀಲ
ಹಾವೇರಿ: ಜೂನ್ 08: ಮುಂಗಾರು ಸೋಯಾಬಿತ್ತನೆಯ ಮೊಳಕೆ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ಕಂಪನಿಯ ಮಾಲೀಕರು ಹಾಗೂ ಪೂರೈಕೆದಾರರ ಸಭೆ ಕರೆಯಲಾಗಿದೆ. ಬೀಜದ ಸಮಸ್ಯೆಗಳಿದ್ದರೆ ಕಂಪನಿಗಳನ್ನೆ ಹೊಣೆಗಾರರನ್ನಾಗಿ ಮಾಡಿ ರೈತರಿಗೆ ಬಿತ್ತನೆ ವೆಚ್ಚ ಭರಿಸಲು ಕ್ರಮದ ಜೊತೆಗೆ ಅವರ ಮೇಲೆ ಮೊಕದ್ದಮೆ ದಾಖಲಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ ಅವರು ತಿಳಿಸಿದರು.
ಸೋಯಾಬಿನ್ ಮೊಳಕೆ ಸಮಸ್ಯೆ ಕುರಿತಂತೆ ಕೃಷಿ ತಜ್ಞರು ಹಾಗೂ ಕೃಷಿ ಅಧಿಕಾರಿಗಳ ತುತರ್ು ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ವರ್ಷ ಸುರಿದ ಹೆಚ್ಚಿನ ಪ್ರವಾಹದಿಂದಾಗಿ ಈ ವರ್ಷ ಸೋಯಾಬಿನ್ ಮೊಳಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಸಮಸ್ಯೆ ಕೇವಲ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ಎಲ್ಲೆಡೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸೋಯಾಬಿನ್ ಬಿತ್ತನೆ ಕ್ಷೇತ್ರ ಕಡಿಮೆಮಾಡಿ ಪಯರ್ಾಯ ಬೆಳೆಗೆ ರೈತರು ಮುಂದಾಗುವಂತೆ ಮನವಿ ಮಾಡಿಕೊಂಡರು.
ರಾಷ್ಟ್ರೀಯ ಪ್ರವಾಹದ ಹಿನ್ನೆಲೆಯಲ್ಲಿ ಭಾರತ ಸಕರ್ಾರ ಈ ಮೊದಲೇ ಸೋಯಾಬಿನ್ ಬಿತ್ತನೆಯ ತಳಿಯಲ್ಲಿ ಶಕ್ತಿಕಡಿಮೆಯಾದ ಕಾರಣ ಮೊಳಕೆ ಪ್ರಮಾಣವನ್ನು ಶೇ.65ಕ್ಕೆ ಇಳಿಸಿತ್ತು. ಆದರೆ ರಾಜ್ಯದಲ್ಲಿ ಶೇ.50 ರಷ್ಟು ಮೊಳಕೆ ಪ್ರಮಾಣ ಇಳಿಮುಖವಾಗಿದೆ. ರಾಜ್ಯದ ಕೃಷಿ ವಿವಿಗಳು ಶಿಫಾರಸ್ ಮಾಡಿದ ಎಕರೆವಾರು ಸಿಡ್ರೇಟ್ಗಿಂತ (ಬಿತ್ತನೆ ಪ್ರಮಾಣ) ಹೆಚ್ಚುವರಿ ಪ್ರಮಾಣದಲ್ಲಿ ಬಿತ್ತನೆ ಮಾಡಲು ಬೀಜದ ಬೇಡಿಕೆ ಇದೆ. ಈ ಪ್ರಮಾಣದಲ್ಲಿ ಪೂರೈಕೆ ಸಾಧ್ಯವಿಲ್ಲ. ಸೋಯಾಬೀಜದ ಕೊರೆತ ಇರುವಕಾರಣ ರೈತರು ಪಯರ್ಾಯ ಬೆಳೆ ಬೆಳೆ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಕೃಷಿ ತಜ್ಞರು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ಮಧ್ಯಪ್ರದೇಶ ಮತ್ತು ಆಂಧ್ರದಿಂದ 1,30,214.01 ಕ್ವಿಂಟಲ್ ಸೋಯಾಬಿನ್ ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ. ಈ ಪೈಕಿ 1,02,745.05 ಕ್ವಿಂಟಲ್ ಬೀಜವನ್ನು ವಿತರಣೆ ಮಾಡಲಾಗಿದೆ. ಮೊಳಕೆ ಸಮಸ್ಯೆ ಕಾರಣ 2,498 ರೈತರು ಮರಳಿ ಬೀಜವನ್ನು ನೀಡಿದ್ದಾರೆ. ರಾಜ್ಯದ ಸೋಯಾಬಿನ್ ಬಿತ್ತನೆ ಮಾಡಿದ ನಾಲ್ಕು ಜಿಲ್ಲೆಗಳ 9695 ರೈತರು ಬಿತ್ತನೆಮಾಡಿದ 8592.54 ಹೆಕ್ಟೇರ್ ಪ್ರದೇಶದಲ್ಲಿ ಮೊಳಕೆ ಸಮಸ್ಯೆ ಕಂಡುಬಂದಿದೆ ಎಂದು ತಿಳಿಸಿದರು.
30ಕ್ಕೂ ಹೆಚ್ಚು ಕಂಪನಿಗಳು ಸೋಯಾಬಿನ್ ಪೂರೈಕೆಮಾಡಿದ್ದು, ಈ ಪೈಕಿ ಕೆಲ ಲಾಟ್ಗಳಲ್ಲಿ ಮೊಳಕೆ ಸಮಸ್ಯೆ ಎದುರಾಗಿದೆ. ಈ ಕುರಿತಂತೆ ಮಂಗಳವಾರ ಬೆಂಗಳೂರಿನ ಕೃಷಿ ನಿದರ್ೆಶನಾಲಯದಲ್ಲಿ ಸಭೆ ಕರೆಯಲಾಗಿದೆ. ಪೂರೈಕೆದಾರರು, ಕಂಪನಿಗಳ ಮಾಲೀಕರ ಸಭೆ ಕರೆಯಲಾಗಿದೆ. ಈ ಕುರಿತಂತೆ ಚಚರ್ಿಸಿ ಕಳಪೆಗೆ ಕಾರಣರಾದವರ ಮೇಲೆ ಕ್ರಮವಹಿಸಲಾಗುವುದು. ಬೀಜವನ್ನು ಪ್ರಮಾಣಿಕರಿಸಿದ ಹಾಗೂ ಪೂರೈಕೆದಾರರನ್ನು ಹೊಣೆಗಾರರನ್ನಾಗಿ ಮಾಡಿ ನಷ್ಟ ತುಂಬಿಸಿಕೊಡಲಾಗುವುದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ರಾಣೇಬೆನ್ನೂರು ಕ್ಷೇತ್ರ ಶಾಸಕ ಅರುಣಕುಮಾರ ಗುತ್ತೂರ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಮೇಶ ದೇಸಾಯಿ, ಧಾರವಾಡ ವಿಶ್ವವಿದ್ಯಾಲಯದ ಕುಲಪತಿ ಮಹದೇವ ಛಟ್ಟಿ, ಕೃಷಿ ಇಲಾಖೆ ಅಪರ ನಿದರ್ೆಶಕರಾದ ವೆಂಕರಾಮರೆಡ್ಡಿ ಪಾಟೀಲ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 