ಫೋಟೋ, ವಿಡಿಯೋಗ್ರಾಫರ್ ಸಂಘದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
Photo and Videographer Association Cricket Tournament kicks off
ಫೋಟೋ, ವಿಡಿಯೋಗ್ರಾಫರ್ ಸಂಘದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಹುಬ್ಬಳ್ಳಿ 12: ನಗರದ ನೆಹರು ಮೈದಾನದಲ್ಲಿ ಹುಬ್ಬಳ್ಳಿ ಫೋಟೋ ಹಾಗು ವಿಡಿಯೋಗ್ರಾಫರ್ ಸಂಘ ಹಾಗೂ ವಿ ಎ ಕೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹಾಗೂ ವಿ ಎ ಕೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ್ ಅಶೋಕ ಕಾಟ್ವೆ ಇವರು ಕ್ರಿಕೆಟ್ ಆಡುವ ಮುಖಾಂತರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆಯನ್ನು ನೀಡಿದರು. ಸಂಘದ ಸದಸ್ಯರು ನಿತ್ಯ ತಮ್ಮ ವೃತ್ತಿಯಲ್ಲಿ ತೊಡಗಿರುತ್ತಾರೆ. ಸಂಘವು ಇಂತಹ ಕ್ರೀಡೆ ಆಯೋಜಿಸುವ ಮೂಲಕ ಸಂಘದ ಸದಸ್ಯರಿಗೆ ಆರೋಗ್ಯಕರ ವಾತಾವರಣವನ್ನು ನಿರ್ಮಿಸಿದಂತಾಗುತ್ತದೆ. ಕ್ರೀಡೆಯಂದ ಮೇಲೆ ಸೋಲು ಗೆಲುವು ಸಹಜ ಸಂಘದ ಎಲ್ಲ ತಂಡಗಳು ಕ್ರೀಡಾಮನೊಭಾವದಿಂದ ಆಡಬೇಕು ಎಂದರು. ವಿ ಎ ಕೆ ಫೌಂಡೇಶನ್ ಅಧ್ಯಕ್ಷ ವೆಂಕಟೇಶ್ ಕಾಟ್ವೇ ಮಾತನಾಡಿ ಛಾಯಾಗ್ರಾಹಕದಲ್ಲಿಯೂ ಕ್ರಿಕೆಟ್ ಪ್ರತಿಭೆ ಕಂಡು ಬಹಳ ಸಂತೋಷವಾಯಿತು. ಇಂಥ ಪಂದಾವಳಿಯನ್ನು ಜಿಲ್ಲಾ ಮಟ್ಟದಲ್ಲಿಯೂ ಆಡಿಸಬೇಕು. ಅದಕ್ಕೂ ಕೂಡ ನಮ್ಮ ಸಂಸ್ಥೆಯು ಸಹಾಯವನ್ನು ನೀಡಲು ಯಾವಾಗಲೂ ಸಿದ್ಧ ಎಂದು ಹೇಳಿದರು. ಸಂಘದ ಅಧ್ಯಕ್ಷ ಕಿರಣ ಬಾಕಳೆ ಉಪಾಧ್ಯಕ್ಷ ದಿನೇಶ್ ದಾಬಡೆ ಕಾರ್ಯದರ್ಶಿ ರವೀಂದ್ರ ಕಾಟಿಗರ, ಅನಿಲ್ ತುರುಮರಿ, ಪದಾಧಿಕಾರಿಗಳಾದ ವಿನಾಯಕ ಸಫಾರಿ, ರಾಕೇಶ್ ಪವಾರ್, ಅಲ್ಲಾಭಕ್ಷ ಅಧೋನಿ, ಆನಂದ ರಾಜೋಳ್ಳಿ, ಆನಂದ್ ಮೆಹರವಾದೆ, ಕೃಷ್ಣ ಪೂಜಾರಿ, ವಿಜಯ ಬಾಕಳೆ, ರಶೀದ್ ವೀರೂ, ಬಸವಾ ಪವನ ಕಠಾರೆ, ವಿಶಾಲ್ ಪೂಜಾರಿ, ಕಿಶನ್ ಶಾಲ್ಗರ್ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 