ತೇಜಸ್ ಎಕ್ಸ್ ಪ್ರೆಸ್ ರೈಲಿಗೆ ಪಿಯೂಷ್ ಗೋಯಲ್ ಹಸಿರು ನಿಶಾನೆ
ಅಹಮದಾಬಾದ್ (ಗುಜರಾತ್), ಜ ೧೭,ಅಹಮದಾಬಾದ್-ಮುಂಬೈ ತೇಜಸ್ ಎಕ್ಸ್ಪ್ರೆಸ್ ರೈಲಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಬೆಳಿಗ್ಗೆ ಹಸಿರು ನಿಶಾನೆ ತೋರಿಸಿದರು.ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ತೇಜಸ್ ರೈಲಿನಲ್ಲಿ ೭೩೬ ಮಂದಿ ಪ್ರಯಾಣಿಸಬಹುದು. ಅಹಮದಾಬಾದ್-ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ವಾರದಲ್ಲಿ ಆರು ದಿನ ಸಂಚರಿಸುವ ಈ ರೈಲನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಉದ್ಘಾಟಿಸಿದರು. ಈ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಐ ಆರ್ ಸಿ ಟಿಸಿ ಉಚಿತವಾಗಿ ೨೫ ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲಿದೆ. ರೈಲು ಒಂದು ಗಂಟೆ ವಿಳಂಬವಾದರೆ ೧೦೦ ರೂಪಾಯಿ, ಎರಡು ಗಂಟೆಗೂ ಹೆಚ್ಚು ಕಾಲ ವಿಳಂಬ ವಾದರೆ ಪ್ರಯಾಣಿಕರಿಗೆ ೨೫೦ ರೂ ನಷ್ಟ ಪರಿಹಾರವನ್ನು ನೀಡಲಿದೆ. ಪ್ರತಿಯೊಬ್ಬ ಪ್ರಯಾಣಿಕರಿಗೆ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಬಾಟಲ್ ಪೂರೈಸುವ ಜತೆಗೆ, ಪ್ರತಿ ಬೋಗಿಯಲ್ಲಿ ಆರ್ವೊ ವಾಟರ್ ಫಿಲ್ಟರ್ ಅಳವಡಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 