ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ
ಕೊಪ್ಪಳ 26: ಕೊಪ್ಪಳ ನಗರದ ಫುಡ್ಪಾಯಿಂಟ್ ಬೇಕರಿಯಿಂದ ಲಕ್ಷ್ಮೀ ಚಿತ್ರಮಂದಿರದವರೆಗಿನ ವಿವಿಧ ಉದ್ದಿಮೆ ಮಳಿಗೆಗಳ ಮೇಲೆ ನಗರಸಭೆಯು ದಾಳಿ ನಡೆಸಿ, ಸುಮಾರು 15 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದು, ಸ್ಥಳದಲ್ಲಿಯೇ ನಾಶಗೊಳಿಸಿದೆ.
ಪೌರಾಡಳಿತ ನಿದರ್ೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ಕೊಪ್ಪಳ ಇವರ ಆದೇಶದನ್ವಯ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಿ, ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಗುರುವಾರದಂದು ಕೊಪ್ಪಳ ನಗರದ ತಹಸೀಲ್ ಕಛೇರಿ ರಸ್ತೆಯಲ್ಲಿರುವ ಫುಡ್ಪಾಯಿಂಟ್ ಬೇಕರಿಯಿಂದ ಲಕ್ಷ್ಮೀ ಚಿತ್ರಮಂದಿರದವರೆಗೆ ಇರುವ ವಿವಿಧ ಉದ್ದಿಮೆಗಳ ಮಳಿಗೆಗಳ ಮೇಲೆ ನಗರಸಭೆಯು ದಾಳಿ ನಡೆಸಿದ್ದು, ಸುಮಾರು 15 ಕೆಜಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಮತ್ತು ಪ್ಲಾಸ್ಟಿಕ್ ಕಪ್ಗಳನ್ನು ವಶಕ್ಕೆ ಪಡೆದು, ಸ್ಥಳದಲ್ಲಿಯೇ ನಾಶಗೊಳಿಸಲಾಗಿದೆ. ಪರಿಸರ ಅಭಿಯಂತರ ಅಶೋಕ್, ಸಜ್ಜನ್, ಆರೋಗ್ಯ ನಿರೀಕ್ಷಕ ರಾಘವೇಂದ್ರ ಚವ್ಹಾಣ್ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 