ಕೊಪ್ಪಳ ನಗರಸಭೆಯಿಂದ ಪ್ಲಾಸ್ಟಿಕ್ ವಸ್ತುಗಳ ವಶ
ಕೊಪ್ಪಳ 26: ಕೊಪ್ಪಳ ನಗರದ ಫುಡ್ಪಾಯಿಂಟ್ ಬೇಕರಿಯಿಂದ ಲಕ್ಷ್ಮೀ ಚಿತ್ರಮಂದಿರದವರೆಗಿನ ವಿವಿಧ ಉದ್ದಿಮೆ ಮಳಿಗೆಗಳ ಮೇಲೆ ನಗರಸಭೆಯು ದಾಳಿ ನಡೆಸಿ, ಸುಮಾರು 15 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದು, ಸ್ಥಳದಲ್ಲಿಯೇ ನಾಶಗೊಳಿಸಿದೆ.
ಪೌರಾಡಳಿತ ನಿದರ್ೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ಕೊಪ್ಪಳ ಇವರ ಆದೇಶದನ್ವಯ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಿ, ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಗುರುವಾರದಂದು ಕೊಪ್ಪಳ ನಗರದ ತಹಸೀಲ್ ಕಛೇರಿ ರಸ್ತೆಯಲ್ಲಿರುವ ಫುಡ್ಪಾಯಿಂಟ್ ಬೇಕರಿಯಿಂದ ಲಕ್ಷ್ಮೀ ಚಿತ್ರಮಂದಿರದವರೆಗೆ ಇರುವ ವಿವಿಧ ಉದ್ದಿಮೆಗಳ ಮಳಿಗೆಗಳ ಮೇಲೆ ನಗರಸಭೆಯು ದಾಳಿ ನಡೆಸಿದ್ದು, ಸುಮಾರು 15 ಕೆಜಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಮತ್ತು ಪ್ಲಾಸ್ಟಿಕ್ ಕಪ್ಗಳನ್ನು ವಶಕ್ಕೆ ಪಡೆದು, ಸ್ಥಳದಲ್ಲಿಯೇ ನಾಶಗೊಳಿಸಲಾಗಿದೆ. ಪರಿಸರ ಅಭಿಯಂತರ ಅಶೋಕ್, ಸಜ್ಜನ್, ಆರೋಗ್ಯ ನಿರೀಕ್ಷಕ ರಾಘವೇಂದ್ರ ಚವ್ಹಾಣ್ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 