ಕೂಡಗಿಯಲ್ಲಿ ಅಂತರರಾಷ್ಟ್ರೀಯ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ: ಶಾಸಕ ಶಿವಾನಂದ ಪಾಟೀಲ
Plans to build an international agricultural market in Kudagi: MLA Shivananda Patil
ಕೊಲ್ಹಾರ 17 : ದೇಶದೆಲ್ಲೆಡೆ ಖ್ಯಾತಿ ಗಳಿಸಿರುವ ಈ ಭಾಗದ ರೈತರ ವಿಳ್ಯದೆಲೆ ಮತ್ತು ಈರುಳ್ಳಿ ಖರೀದಿ ಮತ್ತು ಮಾರಾಟಕ್ಕಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಕೂಡಗಿಯಲ್ಲಿ ನಿರ್ಮಿಸುವ ಚಿಂತನೆಯಿದ್ದು ಭವಿಷ್ಯದಲ್ಲಿ ಅದನ್ನು ನಿರ್ಮಿಸುವ ಯೋಜನೆ ಇದೆ ಎಂದು ಶಾಸಕ ಶಿವಾನಂದ ಪಾಟೀಲ ಭರವಸೆ ನೀಡಿದರು. ಸಮೀಪದ ಕೂಡಗಿ ಗ್ರಾಮದ ಮಾರುತೇಶ್ವರ ದೇವಸ್ಥಾನ ಬಳಿ ಸಮುದಾಯ ಭವನ, ಎಪಿಎಂಸಿ ಬಳಿ ಸಿಸಿ ರಸ್ತೆ, ಕೂಡಗಿ ತಾಂಡಾದ 2 ಕಡೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಭಾಗದ ಜನ ಎನ್ಟಿಪಿಸಿಗಾಗಿ ತಮ್ಮ ಫಲವತ್ತಾದ ಜಮೀನನ್ನು ಕಳೆದುಕೊಂಡಿದ್ದಾರೆ. ಆದರೆ ಅದಕ್ಕೆ ತಕ್ಕ ಪ್ರತಿಫಲ ಅವರಿಗೆ ಎನ್ಟಿಪಿಸಿ ಇನ್ನೂ ನೀಡಿಲ್ಲ ಎಂದರು. ಕೂಡಗಿ ತಾಂಡಾದಲ್ಲಿ 33 ಕೊಳವೆ ಭಾವಿಗಳಿದ್ದರೂ ಸ್ಥಳೀಯ ನಿವಾಸಿಗರಿಗೆ ಕುಡಿಯುವ ನೀರಿನ ತೊಂದರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಕುಡಿಯುವ ನೀರಿನ ಬಗ್ಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ವೇ.ಗಂಗಾಧರಯ್ಯ ಹಿರೇಮಠ ಪೂಜೆ ನೆರವೇರಿಸಿದರು. ಪ್ರಮುಖರಾದ ಮೈರಾಜಪೀರಾ ಜಾಗೀರದಾರ, ತಾನಾಜಿ ನಾಗರಾಳ, ಕಲ್ಲು ದೇಸಾಯಿ, ರಫೀಕ ಪಕಾಲಿ, ಭರ್ಮಣ್ಣ ಬಿದರಿ, ಶಿವಪ್ಪ ಗುಡದಿನ್ನಿ, ಚಂದ್ರಶೇಖರ ಜುಗತಿ, ಸಂಗನಗೌಡ ಪಾಟೀಲ, ಮಹ್ಮದಆರೀಪ್ ತಾಳಿಕೋಟಿ, ರಾಜು ರಾಠೋಡ, ಈಶ್ವರ ಜಾಧವ, ಬಾಬು ಕೋಲಾರ, ಶಫೀಕ ಜಾಗೀರದಾರ, ಕಾಶಿಬಾಯಿ ಉಳ್ಳಾಗಡ್ಡಿ, ಹೈದರಿ್ಲ ಇನಾಮದಾರ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 