ಬೆಟಗೇರಿ: ಪ್ರತಿಯೊಬ್ಬರೂ ಸಸಿ ನೆಟ್ಟು, ಪೋಷಣೆ, ಪಾಲನೆ ಮಾಡಿ
ಲೋಕದರ್ಶನ ವರದಿ
ಬೆಟಗೇರಿ 27: ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು, ಪೋಷಣೆ, ಪಾಲನೆ ಮಾಡಿ ಗಿಡಗಳಾಗಿ ಬೆಳಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಸತಿ ಶಾಲೆಯ ಆಡಳಿತಾಧಿಕಾರಿ ಚಂದ್ರು ಹಾಲೊಳ್ಳಿ ಹೇಳಿದರು.
ಗ್ರಾಮದ ಚೈತನ್ಯ ವಸತಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗುರುವಾರ ಜೂ.27 ರಂದು ಆಯೋಜಿಸಿದ ಸಸಿ ನೇಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ಥಳೀಯ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ದೇವಕಿ ಗೌಡ ಮಾತನಾಡಿ, ಮನುಷ್ಯನಿಗೆ ಪರಿಸರದಿಂದಾಗುವ ಪ್ರಯೋಜನಗಳ ಕುರಿತು ಹೇಳಿದ ಬಳಿಕ ಶಾಲಾ ಆವರಣದಲ್ಲಿ ಸಸಿ ನೆಟ್ಟು, ನೀರು ಹಾಕಲಾಯಿತು.
ಇಲ್ಲಿಯ ಚೈತನ್ಯ ಗ್ರುಪ್ಸ್ನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಸಂಜು ಮೆಳವಂಕಿ, ಶಿವಾನಂದ ಪಟ್ಟಿಹಾಳ, ಹೇಮಾ ಕಲಾದಗಿ, ಗೀತಾ ನಾಯ್ಕ, ಸುಮಿತ್ರಾ ಮಾದರ, ಎನ್.ಎ.ಮಿಜರ್ಾನಾಯ್ಕ, ಪೂಜಾ ಪರಿಟ, ನಬಿಸಾಬ ನದಾಫ್, ಗಜಾನನ ಮುರಗೋಡ, ಮಹಾದೇವ ಖಿಲಾರಿ, ಚೆನ್ನಪ್ಪ ಗೌಡರ, ಶಿವು ಕಾಜಗಾರ, ಶ್ರೀಶೈಲ ದಂಡಿನ, ಉಭಯ ಮಾಧ್ಯಮ ಶಾಲೆಗಳ ಶಿಕ್ಷಕರು, ಸಿಬ್ಬಂದಿ, ವಿದ್ಯಾಥರ್ಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 