ಸಸ್ಯ ಶ್ರಾವಣ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ25 : ಪ್ರತಿಯೋಂದು ಜೀವಿಯೂ ಪ್ರಕೃತಿಯ ಮೇಲೆ ಅವಲಂಬಿತವಾಗಿದೆ, ಹಾಗೇಯೇ ತನ್ನ ಅಸ್ಥಿತ್ವಕ್ಕೆ ಕಾರಣವಾಗಿರುವ ಪ್ರಕೃತಿಯನ್ನು ಕಾಪಾಡುವ ಕೆಲಸವನ್ನು ಮನುಷ್ಯ ಮರೆಯಬಾರದು ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ಕಂಕನವಾಡ ಗ್ರಾಮದಲ್ಲಿ ಐದನೇ ದಿನವಾದ ಶುಕ್ರವಾರ ಸಸ್ಯ ಶ್ರಾವಣ ಕಾರ್ಯಕ್ರಮದಲ್ಲಿ ಗ್ರಾಮದ ಮನೆಗಳಿಗೆ ಸಸಿ ವಿತರಿಸಿ ಮಾತನಾಡಿದ ಅವರು ಪ್ರಕೃತಿ ಕುರಿತು ಪೂವರ್ಿಕರು ಅನುಸರಿಸಿದ ಕ್ರಮ ಇಂದಿಗೂ ಪ್ರಸ್ತುತ ಹಾಗೂ ಇಂದಿನ ಜನತೆಗೆ ಅನುಕರಣೀಯವಾಗಬೇಕಿದೆ ಅದರೊಂದಿಗೆ "ಸಸಿ ನೆಟ್ಟು, ಬರ ಅಟ್ಟು" ಎಂಬ ದ್ಯೇಯ ವಾಕ್ಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪ್ರಕೃತಿಯನ್ನು ನಾವು ಸಂರಕ್ಷಿಸಿದರೆ ಮಾತ್ರ ಜೀವ ಸಂಕುಲ ನಮ್ಮನ್ನು ಸಂರಕ್ಷಿಸುತ್ತದೆ ಇಲ್ಲವಾದರೆ, ಈ ಭೂಮಿಯಿಂದ ಜೀವ ವೈವಿದ್ಯಗಳು ನಿದಾನವಾಗಿ ಕಣ್ಮರೆಯಾಗುತ್ತವೆ ಎಂದರು.
ಕರವೇ ಸ್ವಾಭಿಮಾನಿ ಬಣದ ಜಿಲ್ಲಾದ್ಯಕ್ಷ ರಾಮು ತಳವಾರ ಮಾತನಾಡಿ, ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆ ಈ ನಿಟ್ಟಿನಲ್ಲಿ ಸಂಗನಬಸವ ಶ್ರೀಗಳು ಇಂದು ಕರವೇ ಉಪಸ್ಥಿತಿಯಲ್ಲಿ ಕಂಕನವಾಡ ಗ್ರಾಮ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉಚಿತ ಸಸಿ ನೀಡಿ ಪರಿಸರ ಹಾಗೂ ಪ್ರಕೃತಿಯ ಮುನಿಸಿನ ಬಗ್ಗೆ ಇರುವ ಅರಿವಿನ ಕುರಿತು ತಿಳಿ ಹೇಳಿ ಜನಜಾಗೃತಿಯ ಮೂಲಕ ಎಚ್ಚರಿಸುವ ಕಾರ್ಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಜೊತೆಗೆ ವಿವಿಧ ಸಮಘಟನೆಗಳ ಸಹಭಾಗಿತ್ವದಲ್ಲಿ ಮುನ್ನುಡೆಯುತ್ತಿರುವುದು ಸ್ವಾಗತಾರ್ಹದ ಕಾರ್ಯವಾಗಿದೆ ಎಂದರು.
ಮಕ್ಕಳಂತೆ ಪೋಷಿಸಿ ಬೆಳಸಲು ಮನವಿ ಮೂಲಕ ಗ್ರಾಮದ ತುಂಬೆಲ್ಲಾ ಸಸಿ ನೀಡಿ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಶೇಖರಗೌಡ ಪಾಟೀಲ, ಗಿರಿಧರಗೌಡ ಪಾಟೀಲ, ಯಲ್ಲಪ್ಪ ವಾಲ್ಮೀಕಿ, ಶಿದ್ದನಗೌಡ ಪಾಟೀಲ, ಸೋಮನಗೌಡ ಪಾಟೀಲ, ಈಶ್ವರಗೌಡ ಪಾಟೀಲ ಹಾಗೂ ಕರವೇ ಕಾರ್ಯಕರ್ತರಾದ ಬಸವರಾಜ ಮಲ್ಲೂರ ಸೇರಿದಂತೆ ಕರವೇ ಪಧಾದಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 