ಬೈಲಹೊಂಗಲ: ಗಿಡ ನೆಟ್ಟು ವನಮಹೋತ್ಸವ ಆಚರಣೆ
ಲೋಕದರ್ಶನ ವರದಿ
ಬೈಲಹೊಂಗಲ 03: ಇಡೀ ಜಗತ್ತಿನ ಮನುಕುಲಕ್ಕೆ ಆಸರೆಯಾಗಿರುವ ಭೂಮಿ ಉಳಿಯಬೇಕು. ಭೂಮಿ ಉಳಿಯಬೇಕೆಂದರೆ ಪ್ರತಿಯೊಬ್ಬರೂ ಗಿಡ ಮರಗಳನ್ನು ಬೆಳೆಸುವ ಸಂಕಲ್ಪ ತೊಡಬೇಕು. ಅವುಗಳನ್ನು ಕುಟುಂಬ ಸದಸ್ಯರಂತೆ ಪೋಷಿಸಿ ಪ್ರೀತಿಸಬೇಕು ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಲಹೊಂಗಲ ತಾಲೂಕು ಕೃಷಿ ಮೇಲ್ವಿಚಾರಕ ನಾಗೇಶ ಬೆಣ್ಣಿ ಹೇಳಿದರು.
ಅವರು ತಾಲೂಕಿನ ದೊಡವಾಡ ಗ್ರಾಮದ ವೀರಭದ್ರೇಶ್ವರ ಗುರುಕುಲ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ನಾವು ಪ್ರೀತಿಸಿದರೆ ಪರಿಸರ ನಮ್ಮನ್ನು ಪ್ರೀತಿಸುತ್ತದೆ. ಶಾಲಾ ಮಕ್ಕಳು ಈಗಿನಿಂದಲೇ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮದ ಸಾರ್ವಜನಿಕ ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕು ಎಂದರು.
ಮುಖ್ಯ ಶಿಕ್ಷಕಿ ಬಿ.ಆರ್.ಹುತಮಲ್ಲನವರ, ಶಿಕ್ಷಕರಾದ ಕೆ.ಬಿ.ಕಡೆಮನಿ, ಆರ್,ವೈ.ಜೇಡರ, ಪಿ.ಎನ್.ಗಸ್ತಿ, ಆರ್.ಎಸ್.ನದಾಫ, ಶಿಕ್ಷಕಿಯರಾದ ಎಲ್.ಬಿ.ಮುರಡಿಮಠ, ಯು.ಎಸ್.ಹೂಗಾರ, ಗ್ರಾಮಾಭಿವೃದ್ಧಿ ಸಂಘದ ವಲಯ ಮೇಲ್ವಿಚಾರಕಿ ವಿಜಯಲಕ್ಷ್ಮೀ ಆರ್.ಸಿ, ಗಂಗವ್ವ ಉಜನಿಮಠ, ರತ್ನಾ ಕರೀಕಟ್ಟಿ, ನೇತ್ರಾ ಉದ್ದಾನಶೆಟ್ಟಿ,ಸವಿತಾ ಮೆನಸಿನಕಾಯಿ, ಶಶಿಕಲಾ ಕಲಬಾವಿ ಹಾಗೂ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 