ಪಂ. ಸಾತಲಿಂಗಪ್ಪ ಹೂಗಾರ ದೇಸಾಯಿ ಕಲ್ಲೂರಗೆ ಶಿಷ್ಯವೃಂದದಿಂದ ಗುರುವಂದನೆ-ಸಂಗೀತೋತ್ಸವ
Pm. Satalingappa Hugar Desai Kallur receives Guru Vandana from his disciples
ಧಾರವಾಡ 26: ತಬಲಾವಾದಕ ಪಂ. ಶಂಕ್ರ್ಪ ಭೀಮಾಬಾಯಿ ಹೂಗಾರ ಸಂಗೀತ ಸಂಘವು ದಿನಾಂಕ: 27.07.2025ರಂದು ಮುಂಜಾನೆ 9.30 ಗಂಟೆಗೆ ಧಾರವಾಡದ ಬೇಂದ್ರೆ ಭವನದಲ್ಲಿ ಪಂ. ಸಾತಲಿಂಗಪ್ಪ ಹೂಗಾರ ದೇಸಾಯಿ ಕಲ್ಲೂರ ಅವರಿಗೆ ಶಿಷ್ಯವೃಂದದಿಂದ ಗುರುವಂದನೆ-ಸಂಗೀತೋತ್ಸವ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ.
ಖ್ಯಾತ ಹಿಂದೂಸ್ಥಾನಿ ಗಾಯಕ ಪದ್ಮಶ್ರೀ ಪಂ. ಎಮ್.ವೆಂಕಟೇಶಕುಮಾರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಸೌಭಾಗ್ಯ ಕುಲಕರ್ಣಿ, ಹಿರಿಯ ವಯೋಲಿನ್ ವಾದಕ ಪಂ. ವಾದಿರಾಜ ನಿಂಬರಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರಿಯ ನ್ಯಾಯವಾದಿ ಡಾ.ಉದಯಕುಮಾರ ದೇಸಾಯಿ ಅಧ್ಯಕ್ಷತೆ ವಹಿಸುವರು.
ಪಂ. ಸಾತಲಿಂಗಪ್ಪ ಹೂಗಾರ ದೇಸಾಯಿ ಕಲ್ಲೂರ ಅವರಿಗೆ ಶಿಷ್ಯವೃಂದದಿಂದ ಗುರುವಂದನೆ ಸಲ್ಲಿಸಿ, ಸನ್ಮಾನಿಸುವರು.
ನಂತರ ಜರುಗುವ ಸಂಗೀತೋತ್ಸವದಲ್ಲಿ ಕಲಬುರಗಿಯ ಗಾಯಕ ಶಂಕರ ಹೂಗಾರ ದೇಸಾಯಿ ಕಲ್ಲೂರ ಹಾಗೂ ಉಮೇಶ ಮುನವಳ್ಳಿ ಹಿಂದೂಸ್ಥಾನಿ ಗಾಯನ ಪ್ರಸ್ತುತ ಪಡಿಸುವರು. ಸಂವಾದಿನಿಯಲ್ಲಿ ವಿನೋದ ಪಾಟೀಲ ಹಾಗೂ ತಬಲಾದಲ್ಲಿ ರಘುನಂದನಗೋಪಾಲ ಹೂಗಾರ ಸಾಥ್ ಸಂಗತ ನೀಡುವರು.
ಸಂಸ್ಥೆಯ ಸಂಗೀತ ವಿದ್ಯಾರ್ಥಿಗಳಿಂದ ಸಮೂಹ ಗಾಯನ ಕಾರ್ಯಕ್ರಮ ಜರುಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಮುನವಳ್ಳಿ, ಪ್ರಕಾಶ ಬಾಳಿಕಾಯಿ ಮತ್ತಿತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 