ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ, ಗುರುವಂದನಾ ಕಾರ್ಯಕ್ರಮ
Pm. Shankar Kabadi's 60th birthday celebration, Guru Vandana program
ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ, ಗುರುವಂದನಾ ಕಾರ್ಯಕ್ರಮ
ಧಾರವಾಡ, 07 ; ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶಾರದಾ ಸಂಗೀತ ವಿದ್ಯಾಲಯದ ವತಿಯಿಂದ ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ದಿನಾಂಕ: 10.08.2025ರಂದು ಮುಂ. 9.00 ಗಂಟೆಗೆ ಆಯೋಜಿಸಲಾಗಿದೆ.
ಹಿರಿಯ ವಯೋಲಿನ್ ವಾದಕ ಪಂ. ಬಿ.ಎಸ್.ಮಠ, ಪಂ.ವಾದಿರಾಜ ನಿಂಬರಗಿ ಹಾಗೂ ಹಿರಿಯ ತಬಲಾ ವಾದಕ ಪಂ. ರಘುನಾಥ ನಾಕೋಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಂತರ ಶಂಕರ ಕಬಾಡಿಯವರ ಶಿಷ್ಯ ವೃಂದದಿಂದ ಸ್ವರ ಝೇಂಕಾರ ವಯೋಲಿನ್ ನಾದ ನಮನ ಕಾರ್ಯಕ್ರಮ ನಡೆಸಿಕೊಡಲಿದ್ದು, ನಂತರ ಶಂಕರ ಕಬಾಡಿಯವರ ವಯೋಲಿನ್ ವಾದನಕ್ಕೆ ಡಾ. ರವಿಕಿರಣ ನಾಕೋಡ ತಬಲಾ ಸಾಥ್ ಸಂಗತ ನೀಡುವರು ಎಂದು ಶ್ರೀ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಪ್ರಕಾಶ ಬಾಳಿಕಾಯಿ, ಶಿಷ್ಯವೃಂದದ ಮಳೇಮಲ್ಲೇಶ ಹೂಗಾರ, ಪಾಲಕ ವೃಂದದ ದಯಾನಂದ ದಾನಗೇರಿ, ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 