ಕವಿ ವೀರಣ್ಣ ಮಡಿವಾಳರ ಅವರೊಂದಿಗೆ ಕಾವ್ಯ ಸಂವಾದ

ಗದಗ 17: ನಗರದ ಕೆ.ಎಲ್‌.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗವು ಕನ್ನಡದ ಚೊಚ್ಚಲ ಕೇಂದ್ರ ಯುವಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕವಿ ವೀರಣ್ಣ ಮಡಿವಾಳರ ಅವರೊಂದಿಗೆ ಕಾವ್ಯ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ದಿನಾಂಕ 18.10.2024 ರ ಶುಕ್ರವಾರ ಮುಂಜಾವು 10 ಘಂಟೆಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಲಿದೆ. ಆಸಕ್ತರು ಭಾಗವಹಿಸಬಹುದೆಂದು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅಂದಯ್ಯ ಅರವಟಗಿಮಠ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.