ವೈಜಾಗ್ ನಲ್ಲಿ ವಿಷಾನಿಲ ಸೋರಿಕೆ: ಗೃಹಸಚಿವಾಲಯ, ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಪ್ರಧಾನಿ ಚರ್ಚೆ
ನವದೆಹಲಿ, ಮೇ 7, ಆಂಧ್ರಪ್ರದೇಶದ ವಿಶಾಖಪಟ್ಟಣಂನ ರಾಸಾಯನಿಕ ಸ್ಥಾವರದಲ್ಲಿ ಅನಿಲ ಸೋರಿಕೆ ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಚರ್ಚಿಸಿದ್ದಾರೆ.ಘಟನೆಯಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಬಹುತೇಕ ಮಕ್ಕಳು ಸೇರಿದಂತೆ ಹತ್ತಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಗುರುವಾರ ಬೆಳಗಿನ ಜಾವ ವೈಜಾಗ್ ನ ಎಲ್ಜಿ ಪಾಲಿಮರ್ಸ್ ಇಂಡಿಯಾ ಸಂಸ್ಥೆಯ ರಾಸಾಯನಿಕ ಸ್ಥಾವರಲ್ಲಿ ವಿಷಾನಿಲ ಸೋರಿಕೆಯಾಗಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ‘ವಿಶಾಖಪಟ್ಟಣಂನಲ್ಲಿನ ಪರಿಸ್ಥಿತಿ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇಡಲಾಗಿದೆ.’ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ. ‘ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತಿದ್ದೇನೆ. ವಿಶಾಖಪಟ್ಟಣಂನಲ್ಲಿನ ಎಲ್ಲರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.’ ಎಂದು ಮೋದಿ ಹೇಳಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 