ಪೊಲೀಸ್ ದೂರುಗಳ ಪ್ರಾಧಿಕಾರದ ಆದೇಶ ತೀಪುಗಳನ್ನು ಕನ್ನಡದಲ್ಲಿ ಹೊರಡಿಸಿ -ಮೋಹನ್ ಕುಮಾರ್ ದಾನಪ್ಪ
Police Complaints Authority orders and decisions should be issued in Kannada - Mohan Kumar Danappa
ಪೊಲೀಸ್ ದೂರುಗಳ ಪ್ರಾಧಿಕಾರದ ಆದೇಶ ತೀಪುಗಳನ್ನು ಕನ್ನಡದಲ್ಲಿ ಹೊರಡಿಸಿ -ಮೋಹನ್ ಕುಮಾರ್ ದಾನಪ್ಪ
ಬಳ್ಳಾರಿ 10 : ರಾಜ್ಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಲೋಪ ಮತ್ತು ಗಂಭೀರ ದುರ್ನಡತೆ, ಅಧಿಕಾರ ದುರ್ಬಳಕೆ ಸೇರಿದಂತೆ ಪೊಲೀಸ್ ದೌರ್ಜನ್ಯ ವಿರುದ್ದ ಸಲ್ಲಿಸುವ ದೂರುಗಳ ಆದೇಶಗಳನ್ನು ಕನ್ನಡದಲ್ಲೇ ಹೊರಡಿಸುವಂತೆ ಬೆಂಗಳೂರುನಲ್ಲಿ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ಜಸ್ಟೀಸ್ ಎನ್.ಕೆ.ಸುಧೀಂದ್ರ ರಾವ್ ರವರಿಗೆ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.ರಾಜ್ಯದಿಂದ ದೂರುಸಲ್ಲಿಸುವ ದೂರುದಾರರು ಬಹುತೇಕ ಕೆಳ ಮತ್ತು ಮಧ್ಯಮ ವರ್ಗದವರಾಗಿದ್ದು ಬಹುತೇಕ ಜನರು ಪೂರಕ ಶಿಕ್ಷಣ ಪಡೆದವರಾಗಿದ್ದು ಗ್ರಾಮೀಣ ಭಾಗದವರಾಗಿರುತ್ತಾರೆ. ಕೆಲವರು ದೂರು ಬರೆಯಲು ಶಕ್ತರಾದರೆ ಇನ್ನು ಕೆಲವರು ಶಿಕ್ಷಣವಂತರ ಹಾಗೂ ವಕೀಲರ ಸಹಾಯದಿಂದ ದೂರು ಬರೆಯಿಸಿ ಪ್ರಾಧಿಕಾರದಲ್ಲಿ ಸಲ್ಲಿಸುತ್ತಿದ್ದು, ವಿಚಾರಣೆ ಕೈಗೊಂಡ ಸಂದರ್ಭದಲ್ಲಿ ಆಂಗ್ಲ ಭಾಷೆಯಲ್ಲಿ ಆದೇಶ ಘೋಷಣೆ ಮತ್ತು ದೂರಿನ ಅಂತಿಮ ಆದೇಶ/ನಡಾವಳಿಗಳನ್ನು ಆಂಗ್ಲಭಾಷೆಯಲ್ಲಿ ಹೊರಡಿಸುತ್ತಿರುವುದರಿಂದ ದೂರುದಾರರಿಗೆ ಅರ್ಥವಾಗದೇ ನಡಾವಳಿಯಲ್ಲಿನ ವಿಷಯ ತಿಳಿಯಲು ಕಷ್ಟಕರವಾಗಿರುತ್ತದೆ. ಹಾಗೂ ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆಯಿದ್ದುಸಾರ್ವಜನಿಕ ಹಿತಾದೃಷ್ಟಿಯಿಂದ ಪ್ರಾಧಿಕಾರದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಂತೆ ಪ್ರಸ್ತುತ ಬಾಕಿ ಇರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಆದೇಶ/ತೀಪುಗಳನ್ನು ಕನ್ನಡದಲ್ಲೇ ಹೊರಡಿಸುಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಒತ್ತಾಯಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 