ಲಾಠಿ ಬದಿಗಿಟ್ಟು ಚಿತ್ರೀಕರಣದಲ್ಲಿ ಪೊಲೀಸ್ ಭಾಗಿ
ಬೆಂಗಳೂರು,
ಏ.19, ಸಿಲಿಕಾನ್ ಸಿಟಿ ಪೊಲೀಸರು ಲಾಕ್ ಡೌನ್ ಜಾರಿ ಆದಾಗಿನಿಂದ ಕೊರೊನಾ ಕುರಿತು
ಜಾಗೃತಿ ಮೂಡಿಸಲು ಹಾಡು ಹೇಳಿದ್ದು ಆಯಿತು, ಜಾದೂ ಮಾಡಿ ಜನಜಾಗೃತಿ ಮೂಡಿಸಿದ್ದು
ಆಯಿತು. ಇದೀಗ, ಕೊರೊನಾ ಬಗ್ಗೆ ಅರಿವು ಮೂಡಿಸಲು ಸಾಕ್ಷ್ಯಚಿತ್ರ (ಡಾಕ್ಯೂಮೆಂಟರಿ) ಒಂದನ್ನು ಮಾಡಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಲಾಠಿ ಬದಿಗಿಟ್ಟ ಪೊಲೀಸರು ಸದ್ಯ ನಗರದ ಚನ್ನಮ್ಮಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನಡೆಯುತ್ತಿರುವ ಸಾಕ್ಷ್ಯಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ .ಕೊರೊನಾ ವೈರಸ್ ಮಾದರಿಯಲ್ಲೇ ಪೊಲೀಸರು ವೇಷ ಧರಿಸಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಅತ್ಯಂತ ಆಕರ್ಷಕವಾಗಿದೆ.ಇನ್ನು, ಪೊಲೀಸರು ನಟಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರೀಕರಣ ನೋಡಲು ಜನ ಬರುತ್ತಿದ್ದು, ನಿಯಂತ್ರಿಸುವುದು ಒಂದು ಹರಸಾಹಸವೇ ಆಗಿದೆ.ಕೊರೊನಾ ಬಗ್ಗೆ ಅರಿವು ಮೂಡಿಸಲು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 