ಇಬ್ಬರು ರೌಡಿಗಳಿಗೆ ಗಡಿಪಾರು ಆದೇಶ ಮಾಡಿದ ಪೋಲಿಸರು
Police issue deportation order to two rowdies
ಲೋಕದರ್ಶನ ವರದಿ
ಯಮಕನಮರಡಿ 05: ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಪೋಲಿಸ್ ಠಾಣೆ ವ್ಯಾಪ್ತಿಯ ಇಂಗಳಿ ಮತ್ತು ಠಾಣಾ ಹತ್ತರಗಿ ಗ್ರಾಮದ ಇಬ್ಬರು ಪುಡಿ ರೌಡಿಗಳಿಗೆ ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಆದೇಶ ಮಾಡಿದ್ದಾರೆ.
ಇತ್ತೀಚಿನ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದ ಕೊಲೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತ ಕೆಲಸ ಮಾಡುತ್ತಿದ್ದ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದ ಲಾಡಜಿಸಾಬ ಗಜಬರಸಾಬ ಮುಲ್ತಾನಿ ಇತನಿಗೆ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಪೋಲಿಸ್ ಠಾಣೆ ವ್ಯಾಪ್ತಿಗೆ ದಿ. 28 - 4 - 2026 ರಂದು ಮತ್ತು ಹತ್ತರಗಿ ಗ್ರಾಮದ ಆನಂದಪೂರ ನಗರದ ಪಾರಿಷ ಉರ್ಫ ಪ್ರಶಾಂತ ಸುರೇಶ ನಾಶಿಪುಡಿ ಇತನಿಗೆ ಧಾರವಾಡ ಉಪ ನಗರ ಪೋಲಿಸ್ ಠಾಣೆ ವ್ಯಾಪ್ತಿಗೆ ದಿ. 30 - 4 - 2026 ರಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಇಬ್ಬರು ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಪೋಲಿಸ್ ಇನ್ಸಪೇಕ್ಟರ ಜಾವಿದ ಮುಷಾಪುರಿ ನೀಡಿದ ವರದಿಯನ್ನು ಆಧರಿಸಿ ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧೀಕಾರಿ ಕೆ ರಾಮರಾಜನ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಯಮಕನಮರ್ಡಿ ಪೋಲಿಸ್ ಇನ್ಸಪೇಕ್ಟರ ಜಾವಿದ ಮುಷಾಪೀರಿ ರವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿವೆ. ಹಾಗೂ ಪುಡಿ ರೌಡಿಗಳಿಗೆ ಸಿಂಹ ಸ್ವಪ್ನ ವಾಗಿದ್ದಾರೆ.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 