ವಾರದಲ್ಲಿ ಒಂದು ದಿನ ಪೊಲೀಸರಿಗೆ ರಜೆ: ಭಾಸ್ಕರ್ ರಾವ್
ಬೆಂಗಳೂರು, ಏ.10, ಕೊರೊನಾ ವೈರಸ್ ಹತೋಟಿಗೆ ತರಲು ಲಾಕ್ಡೌನ್ ಆದೇಶವಾದಾಗಿನಿಂದ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಕೊಂಚ ವಿಶ್ರಾಂತಿಗಾಗಿ ಸಮಯಾವಕಾಶ ನೀಡಲು ಮುಂದಾಗಿದ್ದಾರೆ.ನಗರ ಠಾಣೆಗಳ ಪೊಲೀಸ್ ಸಿಬ್ಬಂದಿ ನಿತ್ಯ ಕೆಲಸದಲ್ಲಿ ತೊಡಗುತ್ತಿದ್ದರಿಂದ ಅವರಿಗೂ ವಿಶ್ರಾಂತಿ ನೀಡುವ ಉದ್ದೇಶದಿಂದ ಪ್ರತಿ ಠಾಣೆಯ ಮೂರನೇ ಒಂದು ಭಾಗದ ಸಿಬ್ಬಂದಿಗೆ ರಜೆ ನೀಡುವಂತೆ ಆಯುಕ್ತರು ಸೂಚಿಸಿದ್ದಾರೆ. ಕೊರೊನಾ ಸೋಂಕಿತರು, ಶಂಕಿತರು ಇರುವ ಕಡೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಳ್ಳುತ್ತಾರೆ. ಹೀಗಾಗಿ ಅವರ ಆರೋಗ್ಯದ ಹಿತ ದೃಷ್ಟಿಯಿಂದ ಸಬ್ಇನ್ಸ್ಪೆಕ್ಟರ್ ಶ್ರೇಣಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಈ ಮೂಲಕ ಸಿಬ್ಬಂದಿಗೆ ಆಯುಕ್ತರು, ಷರತ್ತುಬದ್ಧ ವಾರದ ರಜೆ ನೀಡಲು ಮುಂದಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 