ವಾರದಲ್ಲಿ ಒಂದು ದಿನ ಪೊಲೀಸರಿಗೆ ರಜೆ: ಭಾಸ್ಕರ್ ರಾವ್
ಬೆಂಗಳೂರು, ಏ.10, ಕೊರೊನಾ ವೈರಸ್ ಹತೋಟಿಗೆ ತರಲು ಲಾಕ್ಡೌನ್ ಆದೇಶವಾದಾಗಿನಿಂದ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಕೊಂಚ ವಿಶ್ರಾಂತಿಗಾಗಿ ಸಮಯಾವಕಾಶ ನೀಡಲು ಮುಂದಾಗಿದ್ದಾರೆ.ನಗರ ಠಾಣೆಗಳ ಪೊಲೀಸ್ ಸಿಬ್ಬಂದಿ ನಿತ್ಯ ಕೆಲಸದಲ್ಲಿ ತೊಡಗುತ್ತಿದ್ದರಿಂದ ಅವರಿಗೂ ವಿಶ್ರಾಂತಿ ನೀಡುವ ಉದ್ದೇಶದಿಂದ ಪ್ರತಿ ಠಾಣೆಯ ಮೂರನೇ ಒಂದು ಭಾಗದ ಸಿಬ್ಬಂದಿಗೆ ರಜೆ ನೀಡುವಂತೆ ಆಯುಕ್ತರು ಸೂಚಿಸಿದ್ದಾರೆ. ಕೊರೊನಾ ಸೋಂಕಿತರು, ಶಂಕಿತರು ಇರುವ ಕಡೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಳ್ಳುತ್ತಾರೆ. ಹೀಗಾಗಿ ಅವರ ಆರೋಗ್ಯದ ಹಿತ ದೃಷ್ಟಿಯಿಂದ ಸಬ್ಇನ್ಸ್ಪೆಕ್ಟರ್ ಶ್ರೇಣಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಈ ಮೂಲಕ ಸಿಬ್ಬಂದಿಗೆ ಆಯುಕ್ತರು, ಷರತ್ತುಬದ್ಧ ವಾರದ ರಜೆ ನೀಡಲು ಮುಂದಾಗಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 