ಉಗ್ರರ ಜೊತೆ ಪೊಲೀಸ್ ಅಧಿಕಾರಿ ಬಂಧನ
ಶ್ರೀನಗರ, ಜ12 : ಜಮ್ಮು ಕಾಶ್ಮೀರ ಪೊಲೀಸರು ಇದೆ ಮೊದಲ ಭಾರಿಗೆ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಉಗ್ರರನ್ನು ಕುಲ್ಗಾಂ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಶ್ರೀನಗರದ ಬಳಿಯಿರುವ ಪೊಲೀಸ್ ಅಧಿಕಾರಿಯ ಮನೆ ಮೇಲೆ ದಾಳಿ ಮಾಡಿ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆ ಸಮಯದಲ್ಲಿ ಮೀರ್ ಬಜಾರ್ ರಾಷ್ಟ್ರೀಯ ಹೆದ್ದಾರಿಯ ಬಳಿ ವಾಹನವೊಂದರಲ್ಲಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇಬ್ಬರು ಉಗ್ರರರನ್ನು ಬಂಧಿಸಿ ಅವರಿಂದ 5 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉಗ್ರರೊಂದಿಗೆ ಬಂಧಿತರಾದ ಮೊದಲ ಘಟನೆ ಇದಾಗಿದೆ. ಈ ಪೊಲೀಸ್ ಅಧಿಕಾರಿ ಕಳೆದ ಬಾರಿ ರಾಷ್ಟ್ರಪತಿ ಪದಕ ವಿಜೇತರಾಗಿದ್ದರು ಎಂದೂ ವರದಿಯಾಗಿದೆ.
ಬಂಧಿತ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೈಯದ್ ನವೀದ್ ಬಾಬಾ ದಕ್ಷಿಣ ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾಗಿದ್ದು, ಮತ್ತೊಬ್ಬ ಉಗ್ರನನ್ನು ಆಸಿಫ್ ರಥರ್ ಎಂದೂ ಗುರುತಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 