ಶಿವಸೇನೆ, ಎನ್ ಸಿ ಪಿ, ಕಾಂಗ್ರೆಸ್ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ಮುಂಬೈ, ನ 11 : ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿ ಪಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡಲಿದೆಯೇ? ಬಿಜೆಪಿ ಸರ್ಕಾರ ರಚನೆಗೆ ಆಸಕ್ತಿ ತೋರದ ಕಾರಣ, ಎರಡನೇ ಅತಿದೊಡ್ಡ ಪಕ್ಷವಾಗಿರುವ ಶಿವಸೇನೆಗೆ ರಾಜ್ಯಪಾಲರು ಆಹ್ವಾನ ನೀಡಿದ್ದು ಮೂರೂ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸರ್ಕಾರ ರಚನೆಯ ಸಂಬಂಧ ಶಿವಸೇನೆಯ ನಾಯಕ ಸಂಜಯ್ ರಾವತ್ ಇಂದು ಮುಂಬೈ ಮತ್ತು ದೆಹಲಿಯಲ್ಲಿ ಕ್ರಮವಾಗಿ ಶರದ್ ಪವಾರ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸರ್ಕಾರ ರಚನೆಯ ಸಂಬಂಧ ಸೋಮವಾರ ಸಂಜೆ 7.30 ರೊಳಗೆ ಶಿವಸೇನೆ ತನ್ನ ಅಭಿಪ್ರಾಯವನ್ನು ರಾಜ್ಯಪಾಲರಿಗೆ ತಿಳಿಸಬೇಕಾಗಿದೆ. ಮೂರೂ ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಶಿವಸೇನೆ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದೋ ಇಲ್ಲವೋ ಎಂಬುದು ರಾತ್ರಿಯ ವೇಳೆಗೆ ಸ್ಪಷ್ಟವಾಗಲಿದೆ. ಈ ನಡುವೆ ಶಿವಸೇನೆಗೆ ಬೆಂಬಲ ನೀಡಬೇಕಾದಲ್ಲಿ ಬಿಜೆಪಿಯ ಸಂಬಂಧವನ್ನು ಮುರಿದುಕೊಂಡು ಹೊರಬರಬೇಕು ಎಂದು ಎನ್ ಸಿ ಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಿಗಿಪಟ್ಟು ಹಾಕಿವೆ. ಒಂದು ವೇಳೆ ಶಿವಸೇನೆ, ಎನ್ ಸಿ ಪಿ ಮತ್ತು ಕಾಂಗ್ರೆಸ್ ಜೊತೆ ಸೇರಿಕೊಂಡು ಸರ್ಕಾರ ರಚನೆ ಮಾಡುವುದೇ ಆದಲ್ಲಿ, ಕೇಂದ್ರದಲ್ಲಿ ಶಿವಸೇನೆಯ ವತಿಯಿಂದ ಮಂತ್ರಿಯಾಗಿರುವ ಅರವಿಂದ್ ಸಾವಂತ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಗುತ್ತದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 