ಪುರಸಭೆ ಮುಖ್ಯಾಧಿಕಾರಿಯಾಗಿ ಪೂಜಾರ
ಲೋಕದರ್ಶನ
ವರದಿ
ಬ್ಯಾಡಗಿ 13:
ಮಾನ್ಯ ಉಚ್ಚ ನ್ಯಾಯಾಲಯ ನೀಡಿದ್ದ
ತಡೆಯಾಜ್ಞೆಯನ್ನು ತೆರುವುಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪುರಸಭೆಗೆ ವಿ.ಎಂ.ಪೂಜಾರ
ಅವರನ್ನು ಮುಖ್ಯಾಧಿಕಾರಿಯಾಗಿ ಮುಂದುವರೆಯುವಂತೆ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ.
ವೆಂಕಟೇಶ್ ಆದೇಶಿಸಿದ್ದಾರೆ.
ರಾಜ್ಯ ಸಕರ್ಾರ ಕಳೆದ ಸೆ.12 ರಂದು
ಆದೇಶವೊಂದನ್ನು ಹೊರಡಿಸಿ ವಿ.ಎಂ.ಪೂಜಾರ
ಅವರನ್ನು ವಗರ್ಾವಣೆ ಮೇರೆಗೆ ಸ್ಥಳೀಯ ಪುರಸಭೆಗೆ ಮುಖ್ಯಾಧಿಕಾರಿಯನ್ನಾಗಿ ನಿಯೋಜನೆ ಮಾಡಿತ್ತು, ಆದರೆ ಸಕರ್ಾರದ ಆದೇಶವನ್ನು
ಪ್ರಶ್ನಿಸಿ ಬಿ.ಎ.ನಾಗಲಾಪೂರ
ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು, ಅಜರ್ಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಸೆ.18 ರಂದು ಪೂಜಾರ ಅವರ
ವಗರ್ಾವಣೆ ಆದೇಶಕ್ಕೆ ತಡೆಯಾಜ್ಞೆ (ಸ್ಟೇ) ನೀಡಿತ್ತು. ಹೀಗಾಗಿ ಕಳೆದ ಸೆ.25 ರಂದು
ಮತ್ತೆ ಮುಖ್ಯಾಧಿಕಾರಿಯಾಗಿ ಬಿ.ಎ.ನಾಗಲಾಪೂರ
ಅಧಿಕಾರ ವಹಿಸಿಕೊಂಡಿದ್ದರು.
ತಡೆಯಾಜ್ಞೆ
ತೆರವು:ಕಳೆದ ಸೆ.25 ರಂದು
ಮಾನ್ಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿ.ಎ.ನಾಗಲಾಪೂರ
ಅವರನ್ನು ಬ್ಯಾಡಗಿ ಪುರಸಭೆ ಮುಖ್ಯಾಧಿಕಾರಿ ಹುದ್ದೆಯಿಂದ ತೆರವುಗೊಳಿಸಿ, ಮೊದಲಿದ್ದ ವಿ.ಎಂ.ಪೂಜಾರ
ಅವರನ್ನು ಮುಖ್ಯಾಧಿಕಾರಿಯನ್ನಾಗಿ ನಿಯೋಜನೆ ಮಾಡಿ ಆದೇಶಿಸಿದ್ದಾರೆ. ಮತ್ತು
ಮೊದಲಿದ್ದ ಬಿ.ಎ.ನಾಗಲಾಪೂರ
ಅವರು ವಾರದೊಳಗಾಗಿ ಇಲಾಖೆಯ ಮುಖ್ಯಸ್ಥರಿಗೆ ವರದಿ ಮಾಡಿಕೊಳ್ಳಬೇಕು ಮತ್ತು
ಒಂದೇ ವಾರದಲ್ಲಿ ನಾಗಲಾಪೂರ ಅವರಿಗೆ ಬೇರೊಂದು (ಪ್ಲೇಸ್ಮೆಂಟ್) ಸ್ಥಳಕ್ಕೆ ಮರು ವಗರ್ಾವಣೆ ಆದೇಶ
ನೀಡುವಂತೆಯೂ ತಡೆಯಾಜ್ಞೆ ತೆರವು ಆದೇಶದಲ್ಲಿ ಸೂಚಿಸಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 