ಹೂವಿನಮರಡಿ ಗ್ರಾಮ: ಚಿರತೆ ಹಾವಳಿ, ಕುರಿಗಳ ಸಾವು
ಲೋಕದರ್ಶನವರದಿ
ರಾಣೇಬೆನ್ನೂರು09: ತಾಲೂಕಿನ ಹುಲಿಕಟ್ಟಿ ಗ್ರಾಮವೂ ಸೇರಿದಂತೆ ಬಹುತೇಕ ಗ್ರಾಮಾಂತರ ಪ್ರದೇಶಗಳ ಜಮೀನುಗಳಲ್ಲಿ ಚಿರತೆಗಳು ಸಾಗಿ ಹೋಗುತ್ತಿರುವ ಪ್ರಕರಣಗಳು ವರದಿಯಾಗುತ್ತಲಿವೆ.
ಮೊನ್ನೆಯಷ್ಟೇ ಹುಲಿಕಟ್ಟಿ ಬಳಿಯ ಹೂವಿನಮರಡಿ ಗ್ರಾಮದ ಮನೆಯೊಂದರಲ್ಲಿ ಚಿರತೆಗಳು ಕುರಿಗಳ ಮೇಲೆ ದಾಳಿ ನಡೆಸಿ ರಕ್ತ ಕುಡಿದಿವೆ.
ಕಳೆದ 6ರಂದು ರವಿವಾರ ರಾತ್ರಿ 12ರಿಂದ 1 ರ ಅವಧಿಯಲ್ಲ ಈ ದಾಳಿ ನಡೆದಿದ್ದು, ಇದರಿಂದ ಹಾಲಪ್ಪ ಮಲ್ಲಪ್ಪ ಅರಳಿಕಟ್ಟಿ ಇವರಿಗೆ ಸಂಬಂಧಿಸಿದ ಟಗರುಗಳಾಗಿವೆ. ಚಿರತೆ ದಾಳಿಯಿಂದ ಸುಮಾರು 70 ಸಾವಿರ ರೂ.ಗಳ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪಶು ವೈದ್ಯಕೀಯ ಅಧಿಕಾರಿಗಳು ತಪಾಸಣೆ ನಡೆಸಿ ಚಿರತೆಯಿಂದಾದ ದಾಳಿಯೆಂದು ಖಚಿತಪಡಿಸಿದ್ದಾರೆ.
ಪದೇ ಪದೇ ಈ ಭಾಗದಲ್ಲಿ ಚಿರತೆ ಹಾವಳಿ ಸಂಭವಿಸುತ್ತಿದ್ದು, ಇಲಾಖೆ ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರ, ರೈತರ ಮತ್ತು ಕುರಿಗಾಯಿಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 