ಹೂವಿನಮರಡಿ ಗ್ರಾಮ: ಚಿರತೆ ಹಾವಳಿ, ಕುರಿಗಳ ಸಾವು
ಲೋಕದರ್ಶನವರದಿ
ರಾಣೇಬೆನ್ನೂರು09: ತಾಲೂಕಿನ ಹುಲಿಕಟ್ಟಿ ಗ್ರಾಮವೂ ಸೇರಿದಂತೆ ಬಹುತೇಕ ಗ್ರಾಮಾಂತರ ಪ್ರದೇಶಗಳ ಜಮೀನುಗಳಲ್ಲಿ ಚಿರತೆಗಳು ಸಾಗಿ ಹೋಗುತ್ತಿರುವ ಪ್ರಕರಣಗಳು ವರದಿಯಾಗುತ್ತಲಿವೆ.
ಮೊನ್ನೆಯಷ್ಟೇ ಹುಲಿಕಟ್ಟಿ ಬಳಿಯ ಹೂವಿನಮರಡಿ ಗ್ರಾಮದ ಮನೆಯೊಂದರಲ್ಲಿ ಚಿರತೆಗಳು ಕುರಿಗಳ ಮೇಲೆ ದಾಳಿ ನಡೆಸಿ ರಕ್ತ ಕುಡಿದಿವೆ.
ಕಳೆದ 6ರಂದು ರವಿವಾರ ರಾತ್ರಿ 12ರಿಂದ 1 ರ ಅವಧಿಯಲ್ಲ ಈ ದಾಳಿ ನಡೆದಿದ್ದು, ಇದರಿಂದ ಹಾಲಪ್ಪ ಮಲ್ಲಪ್ಪ ಅರಳಿಕಟ್ಟಿ ಇವರಿಗೆ ಸಂಬಂಧಿಸಿದ ಟಗರುಗಳಾಗಿವೆ. ಚಿರತೆ ದಾಳಿಯಿಂದ ಸುಮಾರು 70 ಸಾವಿರ ರೂ.ಗಳ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪಶು ವೈದ್ಯಕೀಯ ಅಧಿಕಾರಿಗಳು ತಪಾಸಣೆ ನಡೆಸಿ ಚಿರತೆಯಿಂದಾದ ದಾಳಿಯೆಂದು ಖಚಿತಪಡಿಸಿದ್ದಾರೆ.
ಪದೇ ಪದೇ ಈ ಭಾಗದಲ್ಲಿ ಚಿರತೆ ಹಾವಳಿ ಸಂಭವಿಸುತ್ತಿದ್ದು, ಇಲಾಖೆ ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರ, ರೈತರ ಮತ್ತು ಕುರಿಗಾಯಿಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 