ಹೂವಿನಮರಡಿ ಗ್ರಾಮ: ಚಿರತೆ ಹಾವಳಿ, ಕುರಿಗಳ ಸಾವು
ಲೋಕದರ್ಶನವರದಿ
ರಾಣೇಬೆನ್ನೂರು09: ತಾಲೂಕಿನ ಹುಲಿಕಟ್ಟಿ ಗ್ರಾಮವೂ ಸೇರಿದಂತೆ ಬಹುತೇಕ ಗ್ರಾಮಾಂತರ ಪ್ರದೇಶಗಳ ಜಮೀನುಗಳಲ್ಲಿ ಚಿರತೆಗಳು ಸಾಗಿ ಹೋಗುತ್ತಿರುವ ಪ್ರಕರಣಗಳು ವರದಿಯಾಗುತ್ತಲಿವೆ.
ಮೊನ್ನೆಯಷ್ಟೇ ಹುಲಿಕಟ್ಟಿ ಬಳಿಯ ಹೂವಿನಮರಡಿ ಗ್ರಾಮದ ಮನೆಯೊಂದರಲ್ಲಿ ಚಿರತೆಗಳು ಕುರಿಗಳ ಮೇಲೆ ದಾಳಿ ನಡೆಸಿ ರಕ್ತ ಕುಡಿದಿವೆ.
ಕಳೆದ 6ರಂದು ರವಿವಾರ ರಾತ್ರಿ 12ರಿಂದ 1 ರ ಅವಧಿಯಲ್ಲ ಈ ದಾಳಿ ನಡೆದಿದ್ದು, ಇದರಿಂದ ಹಾಲಪ್ಪ ಮಲ್ಲಪ್ಪ ಅರಳಿಕಟ್ಟಿ ಇವರಿಗೆ ಸಂಬಂಧಿಸಿದ ಟಗರುಗಳಾಗಿವೆ. ಚಿರತೆ ದಾಳಿಯಿಂದ ಸುಮಾರು 70 ಸಾವಿರ ರೂ.ಗಳ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪಶು ವೈದ್ಯಕೀಯ ಅಧಿಕಾರಿಗಳು ತಪಾಸಣೆ ನಡೆಸಿ ಚಿರತೆಯಿಂದಾದ ದಾಳಿಯೆಂದು ಖಚಿತಪಡಿಸಿದ್ದಾರೆ.
ಪದೇ ಪದೇ ಈ ಭಾಗದಲ್ಲಿ ಚಿರತೆ ಹಾವಳಿ ಸಂಭವಿಸುತ್ತಿದ್ದು, ಇಲಾಖೆ ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರ, ರೈತರ ಮತ್ತು ಕುರಿಗಾಯಿಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 