ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಪ್ರಜ್ಞಾ ಹಟ್ಟಿ ಆಯ್ಕೆ

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಪ್ರಜ್ಞಾ ಹಟ್ಟಿ ಆಯ್ಕೆ Pragya Hatti selected for state-level talent show


  ರಬಕವಿ-ಬನಹಟ್ಟಿ 16: ಮುಧೋಳದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಾಮಪುರದ ಜ್ಞಾನೋದಯ ಶಿಕ್ಷಣ ಸಂಘದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಶಂಕರ ಹಟ್ಟಿ ಇವಳು ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಸಾಧನೆಯನ್ನು ಸಂಸ್ಥೆಯ ಚೇರಮನ್ನರು, ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.