ಸಂಸದೀಯ ಸಲಹಾ ಸಮಿತಿಗೆ ಪ್ರಜ್ಞಾ ನೇಮಕ : ಸಾಮಾಜಿಕ ಜಾಲತಾಣದಲ್ಲಿ ವಿರೋಧ
ನವದೆಹಲಿ, 21 ಬಿಜೆಪಿಯ ಸಂಸದೆ ಪ್ರಜ್ಞಾ ಠಾಕೂರ್ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಗೆ ನೇಮಕ ಮಾಡಲಾಗಿದೆ. ಅವರ ನೇಮಕಾತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧಾಭಿಪ್ರಾಯಗಳು ಕೇಳಿ ಬರುತ್ತಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷರಾಗಿರುವ 21 ಮಂದಿ ಸಂಸದೀಯ ಸಲಹಾ ಸಮಿತಿಗೆ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪಧರ್ೆ ಮಾಡಿದ್ದ ಪ್ರಜ್ಞಾ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರನ್ನು ಪರಾಭವಗೊಳಿಸಿ ಆಯ್ಕೆಯಾಗಿದ್ದರು. ಮಹಾತ್ಮಾ ಗಾಂಧಿ ಹತ್ಯೆಗೆ ಕಾರಣವಾದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳುವ ಮೂಲಕ ಪ್ರಜ್ಞಾ ಸಿಂಗ್ ಠಾಕೂರ್ ದೇಶದಲ್ಲಿ ವಿವಾದದ ಅಲೆ ಎಬ್ಬಿಸಿದ್ದರು. ಜೊತೆಗೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿ ಕ್ಷಮೆ ಕೋರುವಂತೆ ಪಕ್ಷದಿಂದ ಶೋಕಾಸ್ ನೋಟಿಸ್ ಕೂಡ ಪಡೆದಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 