ಪ್ರಹ್ಲಾದ ಜೋಶಿ ಪ್ರಸ್ತುತ ಪಡಿಸುವ 2025-26 ಕ್ರೀಡಾ ಮಹೋತ್ಸವ
Prahlad Joshi presents the 2025-26 Sports Festival
ಶಿಗ್ಗಾವಿ 24: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಸ್ತುತ ಪಡಿಸುವ 2025-26 ಕ್ರೀಡಾ ಮಹೋತ್ಸವವು ತಾಲೂಕಾ ಕ್ರೀಡಾಂಗಣದಲ್ಲಿ ದಿ 29 ರ ಬೆಳಿಗ್ಗೆ ಮತ್ತು 30 ರಂದು ಆಯೋಜಿಸಲಾಗಿದೆ. ವೈಯಕ್ತಿಕ ಆಟಗಳು: 100 ಮೀ ಓಟ, 800 ಮೀ ಓಟ, ಎತ್ತರ ಜೀಗಿತ, ಉದ್ದ ಜೀಗಿತ, ಗುಂಡು ಎಸೆತ ಹಾಗೂ ಬಹುಮಾನ ಪ್ರಥಮ 7 ಸಾವಿರ, ದ್ವೀತಿಯ 5 ಸಾವಿರ, ತೃತೀಯ 3 ಸಾವಿರ ಹಾಗೂ ಆಕರ್ಷಕ ಮೆಡಲ್.ಗುಂಪು ಆಟಗಳು : ಕಬಡ್ಡಿ, ಖೋ ಖೋ, ವಾಲಿಬಾಲ್, ಅಥ್ಲೆಟಿಕ್ಸ್ ಹಾಗೂ ಬಹುಮಾನ ಪ್ರಥಮ 30 ಸಾವಿರ, ದ್ವೀತಿಯ 20 ಸಾವಿರ, ತೃತೀಯ ಹಾಗೂ ಚತುರ್ಥ ತಲಾ 10 ಸಾವಿರದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತದೆ.
ವಿಶೇಷ ಸೂಚನೆಗಳು: ಶಿಗ್ಗಾಂವ, ಸವಣೂರ-83 ವಿಧಾನಸಭಾ ಕ್ಷೇತ್ರದ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ, ಒಂದು ವಿಧಾನಸಭಾ ಕ್ಷೇತ್ರದಲ್ಲಿ ಆಡಿದ ಕ್ರೀಡಾಪಟುಗಳು ಇನ್ನೊಂದು ವಿಧಾನಸಭಾ ಕ್ಷೇತ್ರದಲ್ಲಿ ಆಡಲು ಅವಕಾಶ ಇರುವುದಿಲ್ಲ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿನ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಮಾತ್ರ ಲೋಕಸಭಾ ಹಂತಕ್ಕೆ ಆಯ್ಕೆಯಾಗುತ್ತಾರೆ, ಮಾಧಕ ವಸ್ತುಗಳನ್ನು ಸೇವಿಸಿದ ಆಟಗಾರರ ತಂಡವನ್ನು ಕೂಡಲೇ ನಿಷೇಧಿಸಲಾಗುವದು, ಕ್ರೀಡಾಪಟುಗಳು ಒಂದು ಕ್ಷೇತ್ರದ ಒಂದೇ ಊರಿನ ಆಟಗಾರರಾಗಿರಬೇಕು, ಎಲ್ಲಾ ಕ್ರೀಡೆಗಳಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ, ಕಡ್ಡಾಯವಾಗಿ ಪರೀಶೀಲನೆಗಾಗಿ ಓರಿಜನಲ್ ಆಧಾರಕಾರ್ಡ್ ತರಬೇಕು, ಸರಿಯಾದ ಸಮಯಕ್ಕೆ ಕ್ರೀಡಾಪಟುಗಳು ಮೈದಾನದಲ್ಲಿ ಹಾಜರಿರಬೇಕು,
ನಿರ್ಣಾಯಕರ ಯವೇ ಅಂತಿಮ ನಿರ್ಣಯ, ಖೋಖೋ ಹಾಗೂ ವಾಲಿಬಾಲ್ ಪಂದ್ಯಗಳನ್ನು ಮಣ್ಣಿನ ಮೈದಾನದಲ್ಲಿ ಆಡಿಸಲಾಗುವುದು, ಖೋ ಖೋ ಪಂದ್ಯಾವಳಿಯ ವಯೋಮಿತಿ ಕ್ರೀಡಾಕೂಟ ನಡೆಯುವ ದಿನಾಂಕಕ್ಕೆ 25 ವರ್ಷ ಮೀರಿರಬಾರದು, ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿಗೆ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಅವಕಾಶ ನೀಡಲಾಗುವದು, ಕಬಡ್ಡಿ ಪಂದ್ಯಾವಳಿಗಳನ್ನು ಮ್ಯಾಟ್ ಮೇಲೆ ಆಡಿಸಲಾಗುವುದು, ವೈಯಕ್ತಿಕ ಆಟಗಳನ್ನು 17 ವರ್ಷ ಒಳಪಟ್ಟವರಿಗೆ ಜೂನಿಯರ್ ವಿಭಾಗದಲ್ಲಿ 17 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸೀನಿಯರ್ ವಿಭಾಗದಲ್ಲಿ ಅಡಿಸಲಾಗುವದು, ದೇಶಿ ಕ್ರೀಡೆಗಳನ್ನು ಲೋಕಸಭಾ ಕ್ಷೇತ್ರ ಮಟ್ಟ(ಫೈನಲ್)ದಲ್ಲಿ ಅಡಿಸಲಾಗುವುದು. ಎಲ್ಲ ಕ್ರೀಡೆಗಳ ನೊಂದಣಿಗೆ 27 ಮಂಗಳವಾರ ದಂದು ಕೊನೆಯ ದಿನಾಂಕ ನಿಗದಿಪಡಿಸಿದೆ ಹೆಚ್ಚಿನ ಮಾಹಿತಿಗಾಗಿ 0836-2251055, 2258955 ಸಂಖ್ಯೆಗೆ ಸಂರಿ್ಕಸಲು ಕೋರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 