ದೇಶದ್ರೋಹಿಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯ ಅನಾಮಿಕರ ಪತ್ರ ಟ್ವಿಟರ್ನಲ್ಲಿ ಶೇರ್ ಮಾಡಿದ ಪ್ರಕಾಶ್ ರಾಜ್ :ನಟ, ಚೇತನ್ ಕುಮಾರಸ್ವಾಮಿ ಹೆಸರು ಉಲ್ಲೇಖ
ಬೆಂಗಳೂರು, ಜ 25,ಸ್ವಾಮಿ ನಿಜಗುಣಾನಂದ, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರಿಗೆ ಪ್ರಾಣ ಬೆದರಿಕೆಯನ್ನೊಡ್ಡಿ ಅನಾಮಿಕ ಪತ್ರ ಬರೆದಿದ್ದು, ಅದನ್ನು ನಟ ಪ್ರಕಾಶ್ ರಾಜ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. “ನಿಜಗುಣಾನಂದರೇ ನಿಮ್ಮ ಹಾಗೂ ನಿಮ್ಮ ಜೊತೆಯಲ್ಲಿರುವ ಧರ್ಮ ಹಾಗೂ ದೇಶ ದ್ರೋಹಿಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ ಅಂತಿಮ ಯಾತ್ರೆಗೆ ಸಿದ್ಧರಾಗಿ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ಪಟ್ಟಿಯಲ್ಲಿ ನಟ ಪ್ರಕಾಶ್ ರಾಜ್ , ನಟ ಚೇತನ್ ಕುಮಾರ್, ಭಗವಾನ್, ಪತ್ರಕರ್ತ ದಿನೇಶ್ ಅಮಿನ್ ಮಟ್ಟು, ಅಗ್ನಿ ಶ್ರೀಧರ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರುಗಳಿವೆ. ಜನವರಿ 29ರಿಂದ ಎಲ್ಲರ ಅಂತಿಮ ಯಾತ್ರೆಗೆ ಮುಹೂರ್ತ ನಿಶ್ಚಯವಾಗಿದ್ದು, ಸಂಹರಿಸಿಯೆ ತೀರುತ್ತೇವೆ ಎಂದು ಅನಾಮಿಕರು ಬರೆದುಕೊಂಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 