‘ವಾಕ್ಥಾನ್ ಸ್ಪರ್ಧೆ’ಯಲ್ಲಿ ಪ್ರಶಾಂತ ನಾಯ್ಕಗೆ ದ್ವಿತೀಯ ಸ್ಥಾನ
Prashanth Nayak wins second place in 'Walkathon Competition'
ಕಾರವಾರ 15: ನಗರದ ರೋಟರಿ ಕ್ಲಬ್ (ಪಶ್ಚಿಮ) ರವರು ಸಂಘಟಿಸಿದ 10 ಕಿ.ಮಿ. ನಡಿಗೆಯ “ವಾಕ್ಥಾನ್” ಸ್ಪರ್ಧೆಯಲ್ಲಿ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ ರಾಮಚಂದ್ರ ನಾಯ್ಕ ಇವರು ದ್ವಿತೀಯ ಸ್ಥಾನವನ್ನು ಪಡೆದು ಟ್ರೋಪಿ ಮತ್ತು 3000 ರೂಪಾಯಿ ಬಹುಮಾನವನ್ನು ಪಡೆದಿರುತ್ತಾರೆ. ಇವರ ಈ ಸಾಧನೆಯನ್ನು ಮೆಚ್ಚಿ ಹಾಗೂ ವಿವಿಧ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಇವರು ಭಾಗವಹಿಸಿ ಬಹುಮಾನ ಗಳಿಸಿದ್ದಕ್ಕಾಗಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯವರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಅಂಜಲಿ ಎಸ್. ಮಾನೆ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 