ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ

 ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ Prashanth of Balamandir High School came second in the state-level sports meet.

ಲೋಕದರ್ಶನ ವರದಿ 



ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ 

ಕಾರವಾರ 05: ದಕ್ಷಿಣಕನ್ನಡ ಜಿಲ್ಲಾಡಳಿತ,ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ದಕ್ಷಿಣಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿ ಮೂಡಬಿದ್ರಿ ಇಲ್ಲಿ ನಡೆದದೈಹಿಕ ಶಿಕ್ಷಕರ ದೈಹಿಕ ಶಿಕ್ಷಣ ಉಪನ್ಯಾಸಕರ ಮತ್ತು ಅಧಿಕಾರಿಗಳ ರಾಜ್ಯಮಟ್ಟದ ಕ್ರೀಡಾಕೂಟ 3 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಾರವಾರದ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಶಾಂತ ರಾಮಚಂದ್ರ ನಾಯ್ಕ ಇವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. 

ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಸ್‌.ಪಿ.ಕಾಮತ, ಉಪಾಧ್ಯಕ್ಷರಾದ ಶ್ರೀ ಅನಿರುದ್ಧ ಹಳದಿಪುರ ಹಾಗೂ ಆಡಳಿತಾಧಿಕಾರಿ ಶ್ರೀ ಜಿ.ಪಿ.ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶ್ರೀಮತಿ ಅಂಜಲಿ ಮಾನೆ ಅಭಿನಂದನೆ ಸಲ್ಲಿಸಿರುತ್ತಾರೆ.