ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ ಎಲ್ ಕೃಷ್ಣನಾಯ್ಕ್‌

ಹೂವಿನ ಹಡಗಲಿ 21: ಗ್ರಾಮೀಣ ಮಕ್ಕಳ  ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ  ಉತ್ತಮ ಕಾರ್ಯಕ್ರಮ ಎಂದು ಶಾಸಕ ಎಲ್ ಕೃಷ್ಣನಾಯ್ಕ್‌ ಹೇಳಿದರು.

ಪಟ್ಟಣದ ಎಸ್ ವಿ ಜಿ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪಟ್ಟಣ ವ್ಯಾಪ್ತಿಯಲ್ಲಿನ ಹಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಪಠ್ಯದ ಜೊತೆಗೆ ನಾಟಕ, ಅಭಿನಯ, ಸಂಗೀತ, ಚಿತ್ರಕಲೆ, ನೃತ್ಯ, ಜಾನಪದ ಹಾಡು ಮೊದಲಾದ ಕಲಾ ಪ್ರಕಾರಗಳು ಪರಿಚಯಿಸುವ ಕೆಲಸ ನಿರಂತರವಾಗಿ ಶಾಲೆಗಳಲ್ಲಿ ನೆನೆಯಬೇಕು ಎಂದು ಹೇಳಿದರು.ಪ್ರತಿಯೊಬ್ಬ ಮಗುವಿನಲ್ಲಿ ಕಲೆ ಅಡಕವಾಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯ ಆಗಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಸಿ ಆರ್ ಸಿ ವ್ಯಾಪ್ತಿಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯು ಆನಂದ್, ಕಾರ್ಯದರ್ಶಿ ವಿ ಹೆಚ್ ಯೇಸು, ಪುರಸಭಾ ಸದಸ್ಯ ಈ ಟಿ ಮಾಲತೇಶ್,ಸಿ ಆರ್ ಪಿ ಚನ್ನವೀರನ ಗೌಡ ಇತರರು ಉಪಸ್ಥಿತರಿದ್ದರು.ಪಟ್ಟಣ ವ್ಯಾಪ್ತಿಯ ಸರ್ಕಾರ ಅನುದಾನಿತ ಅನುದಾನರಹಿತ ಪ್ರಾಥಮಿಕ ಶಾಲೆಯ ಮಕ್ಕಳು ಭಾಗವಹಿಸಿದ್ದರು.