ಜಾಲವಾದ ಕ್ಲಸ್ಟರಿನ ಪ್ರತಿಭಾ ಕಾರಂಜಿ
Pratibha Karanji at Jalawad school
ದೇವರಹಿಪ್ಪರಗಿ 24: ಮಕ್ಕಳಲ್ಲಿ ಅಡಗಿರುವ ನವೀನ ಸಾಮರ್ಥ್ಯಗಳನ್ನು ಅಳೆಯುವಲ್ಲಿ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಜಾಲವಾದ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಎ.ಎಮ್.ಹೊಸಗೌಡರ ಹೇಳಿದರು.
ತಾಲೂಕಿನ ಜಾಲವಾದ ಗ್ರಾಮದ ಕೆಜಿಎಸ್ ಹಾಗೂ ಕೆಬಿಎಸ್ ಶಾಲೆಯಲ್ಲಿ ಆಯೋಜಿಸಿದ್ದ ಜಾಲವಾದ ಕ್ಲಸ್ಟರಿನ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಿ.ಆರಿ್ಪ.ಕಾಶೀಮ ವಾಲೀಕಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ಪರ್ಧೆಯ ನಿಯಮಗಳು ಹಾಗೂ ನಿರ್ಣಾಯಕರ ಕಾರ್ಯವೈಖರಿಯ ಬಗ್ಗೆ ತಿಳಿಸಿಕೊಟ್ಟರು. ಎಸ್.ಡಿ.ಎಮ್.ಸಿ.ಉಪಾಧ್ಯಕ್ಷ ರಾಜು ಗುಂದಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕ್ಲಸ್ಟರಿನ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು .ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಜಿ.ಎಸ್.ಬೇವನೂರ, ತಾಲ್ಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ, ಪ್ರಧಾನ ಕಾರ್ಯದರ್ಶಿ ಪಿ.ಸಿ.ತಳಕೇರಿ, ಎನ್.ಜಿ.ಓ.ಅಧ್ಯಕ್ಷ ನಾಗೇಶ ನಾಗೂರ, ಪಿಯು ಕಾಲೇಜಿನ ಹುಣಶ್ಯಾಳ, ಕೆಜಿಎಸ್ ಶಾಲೆಯ ಮುಖ್ಯಗುರು ಡಿ.ಎ.ಇನಾಮದಾರ, ಗ್ರಾಮ ಪಂಚಾಯತಿ ಸಿಬ್ಬಂದಿ, ಎಸ್.ಡಿ.ಎಮ್.ಸಿ.ಸದಸ್ಯರು, ಎಲ್ಲಾ ಶಾಲೆಗಳ ಮುಖ್ಯಗುರುಗಳು, ತೀರ್ುಗಾರ ಶಿಕ್ಷಕರು, ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿಕ್ಷಕರಾದ ಅಪ್ಪಾಸಾಹೇಬ ಕರಿಕಬ್ಬಿ ನಿರೂಪಿಸಿದರು. ಎಸ್.ಎಮ್.ಚವ್ಹಾಣ ಸ್ವಾಗತಿಸಿದರು. ವಿಶ್ವರಾಜ ಬೋರಗಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 