ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿ
Pratibha Karanji is helpful for personality development of children
ಹೂವಿನ ಹಡಗಲಿ 12: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಹೇಳಿದರು.ಪಟ್ಟಣದ ವಿದ್ಯಾಂಜಲಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ ಎಂದರು. ಶಿಕ್ಷಕರ ಸಂಘದ ಕಾರ್ಯದರ್ಶಿ ವಿ ಎಚ್ ಯೇಸು ಮಾತನಾಡಿ ಗಾಯನ ಅಭಿನಯ ನೃತ್ಯ ವಿವಿಧ ಪ್ರಕಾರಗಳ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕಾಗಿದೆ ಎಂದರು.ವಿದ್ಯಾಂಜಲಿ ಶಾಲೆಯ ಸಂಸ್ಥೆ ಅಧ್ಯಕ್ಷ ಎಂ ಎಂ ಗುರುಬಸವರಾಜ ಮಕ್ಕಳಿಗೆ ನೈತಿಕತೆ ಸಾಂಸ್ಕೃತಿಕ ವಾತಾವರಣ ಶಾಲೆಯಲ್ಲಿ ಕಲ್ಪಿಸಬೇಕು ಎಂದರು.ನಿಕಟ ಪೂರ್ವ ಸಿ ಆರ್ ಪಿ ಚನ್ನವೀರನ ಗೌಡ, ಸಿ ಆರ್ ಪಿ ವೀರೇಶ್ ಬಿ, ಬಿ ಆರ್ ಪಿ ಬಸವರಾಜ ಕೆ, ಗೌಡರ ಹೊನ್ನಪ್ಪ ಎಂ ಸರೋಜಮ್ಮ, ಕೊಟ್ರೇಶ್,ಎಂ ಎಂ ಸುನಂದಾ ಇತರರು ಉಪಸ್ಥಿತರಿದ್ದರು.ಪಟ್ಟಣದ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರಾಥಮಿಕ ಶಾಲಾ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 