ಉರುಸ್ ಸಂಭ್ರಮದಲ್ಲಿ ಹಿಂದೂ-ಮುಸ್ಲಿಮರಿಂದ ಪ್ರಾರ್ಥನೆ
Prayers by Hindus and Muslims during Urus celebrations
ಉರುಸ್ ಸಂಭ್ರಮದಲ್ಲಿ ಹಿಂದೂ-ಮುಸ್ಲಿಮರಿಂದ ಪ್ರಾರ್ಥನೆ
ಹೂವಿನಹಡಗಲಿ 20: ಹೂವಿನಹಡಗಲಿಪಟ್ಟಣದ ಹಜರತ್ ರಾಜಾಬಾಗ್ ಸವಾರ್ (ಯಮನೂರು ಸ್ವಾಮಿ) ದರ್ಗಾದಲ್ಲಿ ಗುರುವಾರ ಬೆಳಿಗ್ಗೆ ವಿಜೃಂಭಣೆಯ ಉರುಸ್ ಕಾರ್ಯಕ್ರಮ ಜರುಗಿತು. ವಂಶಪಾರಂಪರ್ಯ ಮುಜಾವರರು ಬೆಳಗಿನಜಾವ ದರ್ಗಾ ಕಟ್ಟೆಯ ಮೇಲೆ ನೀರಿನಲ್ಲಿ ದೀಪ ಬೆಳಗಿಸಿದರು. ಪವಾಡ ರೀತಿಯಲ್ಲಿ ನಡೆದ ಗಂಧ ಮಹೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬಳಿಕ ಉರುಸು ಆಚರಣೆ ಪ್ರಾರಂಭವಾಯಿತು. ಬೆಳಿಗ್ಗೆಯಿಂದಲೇ ಹಿಂದೂ ಮುಸ್ಲಿಮರು ಏಕಕಾಲಕ್ಕೆ ದರ್ಗಾಕ್ಕೆ ತೆರಳಿ ಪೂಜೆ, ಪ್ರಾರ್ಥನೆ ಸಲ್ಲಿಸಿ ಭಾವೈಕ್ಯ ಮೆರೆದರು. ವಿಜಯನಗರ, ಬಳ್ಳಾರಿ ಜಿಲ್ಲೆ ಸೇರಿದಂತೆ ನೆರೆಯ ದಾಣಗೆರೆ, ಗದಗ, ಹಾವೇರಿ ಜಿಲ್ಲೆಗಳ ಅಪಾರ ಭಕ್ತರು ಪಾಲ್ಗೊಂಡಿದ್ದರು. ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥಿಸಿ ಭಕ್ತರು ದೀಡು ನಮಸ್ಕಾರ, ಕೊಬ್ಬರಿ ಉಪ್ಪು ಸುಡುವುದು, ಸಕ್ಕರೆ ಅರ್ಿಸುವ ಹರಕೆಗಳನ್ನು ತೀರಿಸಿದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 