ಉರುಸ್ ಸಂಭ್ರಮದಲ್ಲಿ ಹಿಂದೂ-ಮುಸ್ಲಿಮರಿಂದ ಪ್ರಾರ್ಥನೆ
Prayers by Hindus and Muslims during Urus celebrations
ಉರುಸ್ ಸಂಭ್ರಮದಲ್ಲಿ ಹಿಂದೂ-ಮುಸ್ಲಿಮರಿಂದ ಪ್ರಾರ್ಥನೆ
ಹೂವಿನಹಡಗಲಿ 20: ಹೂವಿನಹಡಗಲಿಪಟ್ಟಣದ ಹಜರತ್ ರಾಜಾಬಾಗ್ ಸವಾರ್ (ಯಮನೂರು ಸ್ವಾಮಿ) ದರ್ಗಾದಲ್ಲಿ ಗುರುವಾರ ಬೆಳಿಗ್ಗೆ ವಿಜೃಂಭಣೆಯ ಉರುಸ್ ಕಾರ್ಯಕ್ರಮ ಜರುಗಿತು. ವಂಶಪಾರಂಪರ್ಯ ಮುಜಾವರರು ಬೆಳಗಿನಜಾವ ದರ್ಗಾ ಕಟ್ಟೆಯ ಮೇಲೆ ನೀರಿನಲ್ಲಿ ದೀಪ ಬೆಳಗಿಸಿದರು. ಪವಾಡ ರೀತಿಯಲ್ಲಿ ನಡೆದ ಗಂಧ ಮಹೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಬಳಿಕ ಉರುಸು ಆಚರಣೆ ಪ್ರಾರಂಭವಾಯಿತು. ಬೆಳಿಗ್ಗೆಯಿಂದಲೇ ಹಿಂದೂ ಮುಸ್ಲಿಮರು ಏಕಕಾಲಕ್ಕೆ ದರ್ಗಾಕ್ಕೆ ತೆರಳಿ ಪೂಜೆ, ಪ್ರಾರ್ಥನೆ ಸಲ್ಲಿಸಿ ಭಾವೈಕ್ಯ ಮೆರೆದರು. ವಿಜಯನಗರ, ಬಳ್ಳಾರಿ ಜಿಲ್ಲೆ ಸೇರಿದಂತೆ ನೆರೆಯ ದಾಣಗೆರೆ, ಗದಗ, ಹಾವೇರಿ ಜಿಲ್ಲೆಗಳ ಅಪಾರ ಭಕ್ತರು ಪಾಲ್ಗೊಂಡಿದ್ದರು. ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥಿಸಿ ಭಕ್ತರು ದೀಡು ನಮಸ್ಕಾರ, ಕೊಬ್ಬರಿ ಉಪ್ಪು ಸುಡುವುದು, ಸಕ್ಕರೆ ಅರ್ಿಸುವ ಹರಕೆಗಳನ್ನು ತೀರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 