ವಿವಿಧ ಜಯಂತಿಗಳ ಪೂರ್ವ ಸಿದ್ದತಾ ಸಭೆ
Pre-preparatory meeting for various jayantis
ಬೆಳಗಾವಿ, ಫೆ.06: ಫೆಬ್ರುವರಿ ಮಾಹೆಯಲ್ಲಿ ಜರುಗಲಿರುವ ಶ್ರೀ.ಸಂತ ಸೇವಾಲಾಲ ಜಯಂತಿ, ಛತ್ರಪತಿ ಶಿವಾಜಿ ಮಹಾರಜ ಜಯಂತಿ ಹಾಗೂ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಆಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಫೆ.6) ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ ಹೊನಕೇರಿ ಅವರು ಮಾತನಾಡಿ ಫೆ. 15 ರಂದು ಶ್ರೀ.ಸಂತ ಸೇವಾಲಾಲ ಜಯಂತಿ, ಫೆ. 19ರಂದು ಛತ್ರಪತಿ ಶಿವಾಜಿ ಮಹಾರಜ ಜಯಂತಿ ಹಾಗೂ ಪೇ. 20 ರಂದು ತ್ರಿಪದಿ ಕವಿ ಸರ್ವಜ್ಞರ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಿದರು.ಪ್ರತಿ ವರ್ಷದಂತೆ ಮೆರವಣಿಗೆ, ಕಲಾ ಕಲಾತಂಡಗಳ ಪ್ರದರ್ಶನ, ಉಪನ್ಯಾಸಕರ ನೇಮಕ, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಅಗತ್ಯದ ಕ್ರಮ ಕೈಗೊಳ್ಳಬೇಕು. ಫೆ. 15 ಹಾಗೂ ಫೆ.20 ರಂದು ಜರುಗಲಿರುವ ಸಂತಸೇವಾಲಾಲ ಜಯಂತಿ ಹಾಗೂ ತ್ರಿಪದಿ ಕವಿ ಸರ್ವಜ್ಞ ಜಯಂತಿಯನ್ನು ಕುಮಾರ ಗಂಧರ್ವ ರಂಗಮಂದಿರದಲ್ಲಿ ಆಯೋಜಿಸಲು ಹಾಗೂ ಫೆ.19 ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಕಪಿಲೇಶ್ವರ ರಸ್ತೆಯ ಶಿವಾಜಿ ಉದ್ಯಾನವನದಲ್ಲಿ ಆಯೋಜನೆಗೆ ಅಗತ್ಯದ ಸಿದ್ದತೆ ಮಾಡಿಕೊಳ್ಳಬೇಕು.
ಕಾರ್ಯಕ್ರಮದ ಕುರಿತಂತೆ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಅನ್ವಯ ಸಾಕಷ್ಟು ಮುಂಚಿತವಾಗಿ ಮುದ್ರಿಸಿ ಜನಪತ್ರಿನಿಧಿಗಳಿಗೆ ಹಾಗೂ ಗಣ್ಯರಿಗೆ ತಲುಪಿಸಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರುಗಳು, ಗಣ್ಯರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 