ಬೆಳಗಾವಿ: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗೃತ ಕ್ರಮ
ಲೋಕದರ್ಶನ ವರದಿ
ಬೆಳಗಾವಿ 16: ಶಾಸಕ ಅನಿಲ ಬೆನಕೆರವರು ಬೆಳಗಾವಿಯ ಶಿವಾಜಿ ನಗರದಲ್ಲಿ ಸ್ವಾಮಿ ಪೌಂಡೇಶನ್ ಥಾಣೆ, ಮುಂಬೈ ಸಂಸ್ಥಾಪಕ ಅಧ್ಯಕ್ಷರಾದ ಮಹೇಶ ಕದಮ ಇವರ ಸಹಾಯದೊಂದಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಬ್ಲಿಚಿಂಗ್ ಪೌಡರ್ ಹರಡುವುದರೊಂದಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆರವರು ನಗರದಲ್ಲಿ ಅತಿಯಾದ ಮಳೆಯಿಂದ ಅತಿವೃಷ್ಠಿ ಉಂಟಾಗಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗಗಳು ಹರಡುವ ಸಂಭವವಿರುವುದರಿಂದ ನಗರದ ಎಲ್ಲ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು ಹಾಗೂ ಮುನ್ನೆಚ್ಚರವಾಗಿ ಇಂದು ಸ್ವಾಮಿ ಪೌಂಡೇಶನ್ ಥಾಣೆಯ ಸಂಸ್ಥಾಪಕ ಅಧ್ಯಕ್ಷರೊಂದಿಗೆ ಶಿವಾಜಿ ನಗರದಲ್ಲಿ ಬ್ಲಿಚಿಂಗ ಪೌಡರನ್ನು ಹಾಕುವುದರೊಂದಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ನಗರದ ಎಲ್ಲ ಜನತೆಯು ತಮ್ಮ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಬ್ಲಿಚಿಂಗ್ ಪೌಡರ ಹರಡಿ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ವಿನಂತಿಸಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಸ್ವಾಮಿ ಪೌಂಡೇಶನ್ ಥಾಣೆ, ಮುಂಬೈ ಸಂಸ್ಥಾಪಕ ಅಧ್ಯಕ್ಷರಾದ ಮೇಶ ಕದಮ, ಯೊಗೇಶ ಜಾಧವ, ನಿಖಿಲ ಮುಕರ್ುಟೆ, ಮಹೇಶ ಭಾಮಣೆ, ಪ್ರಶಾಂತ ದೇವನ, ತಾಜ ಶೇಖ ಹಾಗೂ ಇತರ ಸ್ಥಳೀಯರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 