ಬೆಳಗಾವಿ: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗೃತ ಕ್ರಮ
ಲೋಕದರ್ಶನ ವರದಿ
ಬೆಳಗಾವಿ 16: ಶಾಸಕ ಅನಿಲ ಬೆನಕೆರವರು ಬೆಳಗಾವಿಯ ಶಿವಾಜಿ ನಗರದಲ್ಲಿ ಸ್ವಾಮಿ ಪೌಂಡೇಶನ್ ಥಾಣೆ, ಮುಂಬೈ ಸಂಸ್ಥಾಪಕ ಅಧ್ಯಕ್ಷರಾದ ಮಹೇಶ ಕದಮ ಇವರ ಸಹಾಯದೊಂದಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಬ್ಲಿಚಿಂಗ್ ಪೌಡರ್ ಹರಡುವುದರೊಂದಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆರವರು ನಗರದಲ್ಲಿ ಅತಿಯಾದ ಮಳೆಯಿಂದ ಅತಿವೃಷ್ಠಿ ಉಂಟಾಗಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗಗಳು ಹರಡುವ ಸಂಭವವಿರುವುದರಿಂದ ನಗರದ ಎಲ್ಲ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು ಹಾಗೂ ಮುನ್ನೆಚ್ಚರವಾಗಿ ಇಂದು ಸ್ವಾಮಿ ಪೌಂಡೇಶನ್ ಥಾಣೆಯ ಸಂಸ್ಥಾಪಕ ಅಧ್ಯಕ್ಷರೊಂದಿಗೆ ಶಿವಾಜಿ ನಗರದಲ್ಲಿ ಬ್ಲಿಚಿಂಗ ಪೌಡರನ್ನು ಹಾಕುವುದರೊಂದಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ನಗರದ ಎಲ್ಲ ಜನತೆಯು ತಮ್ಮ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಬ್ಲಿಚಿಂಗ್ ಪೌಡರ ಹರಡಿ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ವಿನಂತಿಸಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಸ್ವಾಮಿ ಪೌಂಡೇಶನ್ ಥಾಣೆ, ಮುಂಬೈ ಸಂಸ್ಥಾಪಕ ಅಧ್ಯಕ್ಷರಾದ ಮೇಶ ಕದಮ, ಯೊಗೇಶ ಜಾಧವ, ನಿಖಿಲ ಮುಕರ್ುಟೆ, ಮಹೇಶ ಭಾಮಣೆ, ಪ್ರಶಾಂತ ದೇವನ, ತಾಜ ಶೇಖ ಹಾಗೂ ಇತರ ಸ್ಥಳೀಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 