ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ಸಚಿವ ಎಂ. ಬಿ. ಪಾಟೀಲ
Precautions to avoid drinking water problems: Minister M. B. Patil
ವಿಜಯಪುರ 03: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ- ಜಾನುವಾರುಗಳಿಗೆ ಕುಡಿಯಲು ನೀರು ಪೂರೈಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸಲು 14.11.2025ರಂದು ನಡೆದ ನೀರಾವರಿ ಸಲಹಾ ಸಮತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಹಂಚಿಕೆಯಾದ 0.75 ಟಿಎಂಸಿ ನೀರನ್ನು ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ 24.12.2025 ರಂದು ಬೆಳಗಾವಿ ಉತ್ತರ ವಲಯದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮುಖ್ಯ ಅಭಿಯಂತರರಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ಪಂಪ್ ಗಳನ್ನು ಪ್ರಾರಂಭ ಮಾಡುವ ಮೂಲಕ ಅಧಿಕಾರಿಗಳು ನೀರು ಬಿಡುಗಡೆ ಮಾಡಿದ್ದಾರೆ.
ಈ ನೀರು ಬಿಡುಗಡೆಯಿಂದಾಗಿ ತಿಕೋಟಾ ತಾಲೂಕಿನ ಸುಮಾರು 25 ಕೆರೆ ಮತ್ತು 60 ಬಾಂದಾರಗಳಿಗೆ ನೀರು ಬರಲಿದ್ದು, 21 ಗ್ರಾಮಗಳಿಗೆ ನೀರಿನ ಸಮಸ್ಯೆ ನೀಗಲಿದೆ. ಈಗ ಬಿಡುಗಡೆ ಮಾಡಲಾಗಿರುವ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿಯಲು ರೈತರು ಸಹಾಯ ಮಾಡಬೇಕು. ಅಲ್ಲದೇ, ಜನ ಮತ್ತು ಜಾನುವಾರಗಳಿಗೆ ಕುಡಿಯಲು ಮಾತ್ರ ಬಳಸಬೇಕು ಎಂದು ಸಚಿವ ಎಂ. ಬಿ. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ. ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಈಗ ನೀರು ಬಿಡುಗಡೆ ಮಾಡಿರುವುದರಿಂದ ಈ ಯೋಜನೆಯ ವ್ಯಾಪ್ತಿಯ ಜಮಖಂಡಿ ತಾಲೂಕಿನ ಮೂರು ಮತ್ತು ಅಥಣಿ ತಾಲೂಕಿನ ನಾಲ್ಕು ಗ್ರಾಮಗಳಿಗೂ ನೀರು ಸಿಗಲಿದೆ.
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ 