ಜಗಜೀವನ್ ರಾಮ, ಅಂಬೇಡ್ಕರ್ ಕುರಿತು ಪೂರ್ವಭಾವಿ ಸಭೆ
Preliminary meeting on Jagjivan Ram, Ambedkar
ಹುಕ್ಕೇರಿ, 24 : ತಾಲೂಕ್ ಪಂಚಾಯತ್ ಸಭಾ ಭವನದಲ್ಲಿ ಆಯೋಜಿಸಲಾದ ಡಾ,ಬಾಬು ಜಗಜಿವನ ರಾಮ ಮತ್ತು ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ ಜನ್ಮ ದಿನ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ತಾಲೂಕಾ ಮಟ್ಟದ ಕೇಲ ಅನುಷ್ಟಾನ ಅಧಿಕಾರಿಗಳು ಗೈರ ಹಾಜರ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ದಲಿತ ಮುಖಂಡರು ಅಧಿಕಾರಿಗಳ ಪರವಾಗಿ ಸಭೆಗೆ ಬಂದ ಸಿಬ್ಬಂದಿಯನ್ನು ಸಭೆಯಿಂದ ಹೋರ ಹಾಕುವಂತೆ ಆಗ್ರಹಿಸಿದಾಗ ತಹಸಿಲ್ದಾರ ಬಲರಾಮ ಕಟ್ಟಿಮನಿ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಸೂಚಿಸಿದರು.
ಜಿಲ್ಲಾಧಿಕಾರಿಗಳಿಗೆ ಪ್ರೋಡಿಸಿಂಗ ಮೂಲಕ ತಿಳಿಸಲಾಗುವದು ಹಾಗೂ ಅನುಷ್ಟಾನ ಅಧಿಕಾರಿಗಳ ಪರವಾಗಿ ಬಂದ ಸಿಬ್ಬಂದಿಯನ್ನು ಸಭೆಯಿಂದ ಹೋರ ಹೋಗುವಂತೆ ಆದೇಶಿಸಿದರು,ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಸಭೆಯಿಂದ ಹೋರ ನಡೆದರು. ಬಂದಿರುವಂತಹ ಅಧಿಕಾರಿಗಳಿಂದ ಡಾ, ಬಾಬು ಜಗಜೀವನ ರಾಮ ಮತ್ತು ಡಾ, ಬಾಬಾ ಸಾಹೇಬ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಸಭೆ ಆರಂಭಿಸಿದರು.
ತಾಲೂಕಾ ಸಮಾಜ ಕಲ್ಯಾಣ ಸಹಾಯಕ ನಿರ್ದೆಶಕ ಗುರುಶಾಂತ ಪಾವಟೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೇದಿಕೆ ಮೇಲೆ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಟಿ ಆರ್ ಮಲ್ಲಾಡದ, ಗ್ಯಾರಂಟಿ ಅನುಷ್ಟಾನ ಅದ್ಯಕ್ಷ ಶಾನೂಲ ತಹಸಿಲ್ದಾರ, ವಿಭಾಗಿಯ ಅಧಿಕಾರೇತರ ಸದಸ್ಯ ರಮೇಶ ಹುಂಜಿ, ಉದಯ ಹುಕ್ಕೇರಿ, ಪುರಸಭೆ ಮುಖ್ಯಾಧಿಕಾರಿಗಳಾದ ಈಶ್ವರ ಸಿದ್ದಾಳ, ಪ್ರಕಾಶ ಮಠದ, ಮಹೇಶ ಬಜಂತ್ರಿ, ಪ್ರವೀಣ ಮಾಡ್ಯಾಳ, ಬಿ ಎಲ್ ಸನದಿ, ಸವಿತಾ ಹಲಕಿ ಭಾರತಿ ನಂದಿಹಳ್ಳಿ ತಾಲೂಕಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಭೆಯಲ್ಲಿ ದಲಿತ ಮುಖಂಡರು ಕಾರ್ಯಕ್ರಮದ ರೂಪ ರೇಷೆಗಳು ಒಳಗೊಂಡಂತೆ ತತ್ವ ಆದರ್ಶವನ್ನು ಪರಿಪಾಲಿಸಬೇಕೆಂದು ಸಲಹೆ ಸೂಚನೆ ನೀಡಿದರೂ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 