ಯಡಿಯೂರ್ಪ ಅಭಿಮಾನೋತ್ಸವಕ್ಕೆ ಸಿದ್ಧತೆ: ಬಳ್ಳಾರಿಯಲ್ಲಿ ಪೂರ್ವಭಾವಿ ಸಭೆ
Preparations for Yediyurappa's fanfare: Preliminary meeting in Bellary
ಬಳ್ಳಾರಿ 01: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ಇದೇ ತಿಂಗಳ 9 ರಂದು ನಡೆಯುವ ಅಭಿಮಾನೋತ್ಸವದ ಪೂರ್ವ ಸಿದ್ದತಾ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಿಚ್ಚುಗಲ್ಲು ಪಂಚಾಕ್ಷರ್ಪ ಸೇರಿದಂತೆ ಹಲವರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಭಿಮಾನೋತ್ಸವಕ್ಕೆ ಕರೆದುಕೊಂಡು ಹೋಗುವ ಕುರಿತು ಚರ್ಚಿಸಿದರು.ಇದೇ ವೇಳೆ ಜಿಲ್ಲೆಯ ಯಡಿಯೂರ್ಪ ಅಭಿಮಾನಿಗಳು ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯನ್ನು ನಾಳೆ ಸಂಜೆ 5 ಗಂಟೆಗೆ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಯಿತು.ಸಭೆಯಲ್ಲಿ ಎಸ್. ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಬಣಾಪುರ ನಾಗರಾಜಗೌಡ, ಕಪ್ಪಗಲ್ಲು ಶಿವರುದ್ರ್ಪ, ಹೊನ್ನನಗೌಡ, ನಡವಿ ವೀರನಗೌಡ, ಹಲಕುಂದಿ ವೀರನಗೌಡ, ಜಡೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 