ಯಡಿಯೂರ್ಪ ಅಭಿಮಾನೋತ್ಸವಕ್ಕೆ ಸಿದ್ಧತೆ: ಬಳ್ಳಾರಿಯಲ್ಲಿ ಪೂರ್ವಭಾವಿ ಸಭೆ
Preparations for Yediyurappa's fanfare: Preliminary meeting in Bellary
ಬಳ್ಳಾರಿ 01: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ಇದೇ ತಿಂಗಳ 9 ರಂದು ನಡೆಯುವ ಅಭಿಮಾನೋತ್ಸವದ ಪೂರ್ವ ಸಿದ್ದತಾ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಿಚ್ಚುಗಲ್ಲು ಪಂಚಾಕ್ಷರ್ಪ ಸೇರಿದಂತೆ ಹಲವರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಭಿಮಾನೋತ್ಸವಕ್ಕೆ ಕರೆದುಕೊಂಡು ಹೋಗುವ ಕುರಿತು ಚರ್ಚಿಸಿದರು.ಇದೇ ವೇಳೆ ಜಿಲ್ಲೆಯ ಯಡಿಯೂರ್ಪ ಅಭಿಮಾನಿಗಳು ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯನ್ನು ನಾಳೆ ಸಂಜೆ 5 ಗಂಟೆಗೆ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಯಿತು.ಸಭೆಯಲ್ಲಿ ಎಸ್. ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಬಣಾಪುರ ನಾಗರಾಜಗೌಡ, ಕಪ್ಪಗಲ್ಲು ಶಿವರುದ್ರ್ಪ, ಹೊನ್ನನಗೌಡ, ನಡವಿ ವೀರನಗೌಡ, ಹಲಕುಂದಿ ವೀರನಗೌಡ, ಜಡೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 