ಮಹಾ ಶಿವರಾತ್ರಿ ನಿಮಿತ್ಯ ದೇವಸ್ಥಾನಗಳಲ್ಲಿ ಗಂಗಾಜಲ ವಿತರಣೆಗೆ ಸಿದ್ಧತೆ
Preparations for distribution of Ganga water in temples on the occasion of Maha Shivaratri
ಬೆಳಗಾವಿ 13: ಮಹಾಶಿವರಾತ್ರಿಯ ನಿಮಿತ್ತ ನಮ್ಮ ಪರಮೇಶ್ವರನ ದೇವಾಲಯಗಳಲ್ಲಿ ಭಕ್ತರಿಗಾಗಿ ಹಂಚಲು ತಂದಿರುವ ಪವಿತ್ರ ಗಂಗಾ ಜಲವನ್ನು ಶ್ರೀ ಹುಕ್ಕೇರಿ ಹಿರೇಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಷ. ಬ್ರ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು ಇಂದು ನಮ್ಮ ಬೆಳಗಾವಿ ನಗರದಲ್ಲಿ ಸ್ಪರ್ಶಿಸಿ, ಆಶೀರ್ವದಿಸಿ ಹರಸಿ ಕಳುಹಿಸಿದರು.
ರಿಷಿಕೇಶದಿಂದ ಬಿಜೆಪಿ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕರಾದ ಮಹಾಂತೇಶ ವಕ್ಕುಂದ ಹಾಗೂ ಅವರ ಬೆಂಬಲಿಗರು ತಂದಿರುವ ಈ ಗಂಗಾ ಜಲವನ್ನು ಬೆಳಗಾವಿಯ ಪ್ರಮುಖ ಶಿವಾಲಯ ಹಾಗೂ ಮಂದಿರಗಳಲ್ಲಿ ವಿತರಿಸಲಾಗುವುದು, ತಾವೆಲ್ಲ ಇದರ ಸದುಪಯೋಗ ಪಡೆದುಕೊಳ್ಳಲು ಕೋರುತ್ತೇವೆ. ಈ ಗಂಗಾಜಲವು ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದಲ್ಲಿ ಲಭ್ಯವಿದೆ.
ಈ ಸಂದರ್ಭದಲ್ಲಿ ಸುದೈವದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಮನೋಹರ ಮಠದ, ಬಸವರಾಜ ಗಾಣಗಿ ಸೇರಿದಂತೆ ಪ್ರಮುಖರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 